ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ಪದೇ ಪದೇ ರಾಜ್ಯಕ್ಕೆ ಬರುವುದರಿಂದ JDS, ಕಾಂಗ್ರೆಸ್‍ಗೆ ಭಯ ಶುರುವಾಗಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Twitter
Facebook
LinkedIn
WhatsApp
ಮೋದಿ ಪದೇ ಪದೇ ರಾಜ್ಯಕ್ಕೆ ಬರುವುದರಿಂದ JDS, ಕಾಂಗ್ರೆಸ್‍ಗೆ ಭಯ ಶುರುವಾಗಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

ರಾಯಚೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಪದೇ ಪದೇ ರಾಜ್ಯಕ್ಕೆ ಬರುವುದರಿಂದ ಜೆಡಿಎಸ್ (JDS) ಮತ್ತು ಕಾಂಗ್ರೆಸ್‍ನವರಿಗೆ (Congress) ಭಯ ಶುರುವಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ವ್ಯಂಗ್ಯವಾಡಿದ್ದಾರೆ.

ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಮಾತನಾಡಿದ ಮುನೇನಕೊಪ್ಪ, ಕರ್ನಾಟಕಕ್ಕೆ ಮೋದಿಯವರು ಬರುವುದರಿಂದ ರಾಜ್ಯಕ್ಕೆ ಒಳಿತಾಗಲಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇದ್ರೆ ಹೆಚ್ಚಿನ ಅಭಿವೃದ್ಧಿಯಾಗುತ್ತೆ. ಇದು ಜನರಲ್ಲಿ ಇರುವ ನಿರೀಕ್ಷೆಯಾಗಿದೆ. ಸಿದ್ದರಾಮಯ್ಯ (Siddaramaiah), ಡಿಕೆಶಿ (D.K Shivakumar), ಕುಮಾರಸ್ವಾಮಿ (H.D Kumaraswamy)  ಮಾತನಾಡುತ್ತಾರೆ. ಕುಮಾರಸ್ವಾಮಿ ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ಅವರು ಮೋದಿಯವರ ಬಗ್ಗೆ ಮಾತನಾಡುವುದು ಸರಿಯಲ್ಲ. ಮೋದಿ ಬಂದ್ರೆ ಆ ಭಾಗದಲ್ಲಿ ಬಿಜೆಪಿ (BJP) ಗೆಲ್ಲುತ್ತದೆ ಅನ್ನೋ ಮಾತು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಅವರೆಷ್ಟೇ ಪ್ರಯತ್ನ ಮಾಡಲಿ, ಮುಂದಿನ ದಿನಗಳಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಕೇಸ್ ಸಿಬಿಐ (CBI) ತನಿಖೆ ವಿಚಾರವಾಗಿ ಮಾತನಾಡಿದ ಮುನೇನಕೊಪ್ಪ, ಅದು ರಮೇಶ್ ಜಾರಕಿಹೊಳಿಯ ವೈಯಕ್ತಿಕ ವಿಚಾರ. ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ ಶಿವಕುಮಾರ್‌ಗೆ ಅನೇಕ ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳಿವೆ. ಅವರಿಬ್ಬರೂ ಈ ಹಿಂದೆ ಒಂದೇ ಪಾರ್ಟಿಯಲ್ಲಿದ್ದರು. ಸರ್ಕಾರ ಕೆಡವಿದ ಮೇಲೆ ಅವರ ನಡುವೆ ದ್ವೇಷ ಶುರುವಾಗಿದೆ. ಅವರ ಸಿಡಿ ಕೇಸ್ ಬಗ್ಗೆ ನನಗೆ ಏನು ಗೊತ್ತಿಲ್ಲ. ತನಿಖೆ ನಡೆಸಲಿ ಎನ್ನುವುದು ಕೂಡ ಜನರ ಅಭಿಪ್ರಾಯ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ