
ನವದೆಹಲಿ: ದೇಶದ ಹಲವು ಕಡೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ, ದೌರ್ಜನ್ಯ ನಡೆದಿದೆ. ಇದರ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಎಂದು ಅಖಿಲ ಭಾರತ ವೈದ್ಯಕೀಯ ಪರಿಷತ್ತು ದೇಶದ ಗ್ರಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ. ಪರಿಣಾಮಕಾರಿಯಾದ, ಎಲ್ಲಾ ಕ್ರಮಗಳನ್ನು ಒಳಗೊಂಡ ಒಂದು ಕಾನೂನಿನ ಅವಶ್ಯಕತೆ ಹಿಂದಿಗಿಂತಲೂ ಹೆಚ್ಚಾಗಿದೆ ಎಂದು ವೈದ್ಯಕೀಯ ಪರಿಷತ್ತು ಅಭಿಪ್ರಾಯಪಟ್ಟಿದೆ.
ಇತ್ತೀಚಿಗೆ ಅಸ್ಸಾಮಿನಲ್ಲಿ ವೈದ್ಯರ ತಂಡದ ಮೇಲೆ ಒಂದು ಗುಂಪು ಹಲ್ಲೆ ನಡೆಸಿದ ಕಾರಣ, ವೈದ್ಯಕೀಯ ಪರಿಷತ್ತು ಬಹಳಷ್ಟು ಅಸಮಾಧಾನಗೊಂಡಿದ್ದು, ಈ ಬಗ್ಗೆ ಗ್ರಹ ಮಂತ್ರಿಯವರಿಗೆ ರವರಿಗೆ ಪತ್ರ ಬರೆದಿದೆ.
ನಂತರ ಹೇಳಿಕೆಯನ್ನು ಬಿಡುಗಡೆ ಮಾಡಿರುವ ವೈದ್ಯಕೀಯ ಪರಿಷತ್ತು ಇಡೀ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ಸಮುದಾಯದೊಂದಿಗೆ ಪರಿಷತ್ತು ಗಟ್ಟಿಯಾಗಿ ನಿಲ್ಲುತ್ತದೆ ಎಂದು ಕರೆ ನೀಡಿದೆ. ದೇಶದಲ್ಲಿ ಈರೀತಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯಪಟ್ಟಿರುವ ಪರಿಷತ್ತು, ಈ ರೀತಿಯಾದರೆ ಪರಿಸ್ಥಿತಿ ಬಹಳಷ್ಟು ಹದಗೆಟ್ಟು ಹೋಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು