ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿಕ್ಷಕಿಯರಿಬ್ಬರ ಜಡೆ ಜಗಳ- ಮೂಕಪ್ರೇಕ್ಷರಾದ ಶಾಲಾ ಮಕ್ಕಳು

Twitter
Facebook
LinkedIn
WhatsApp
26

ಪಾಟ್ನಾ: ಮುಖ್ಯಶಿಕ್ಷಕಿ ಮತ್ತು ಸಹಾಯಕ ಶಿಕ್ಷಕಿ (Teacher Fight) ಶಾಲೆಯಲ್ಲಿ ಬಡಿದಾಡಿಕೊಂಡಿರುವ ಘಟನೆ ಬಿಹಾರದ ಪಾಟ್ನಾ (Patna) ಜಿಲ್ಲೆಯಲ್ಲಿ ನಡೆದಿದೆ.

ಕೌರಿಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ನಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಶಾಲಾ ಮುಖ್ಯಶಿಕ್ಷಕಿ ಕಾಂತಿ ಕುಮಾರಿ ಮತ್ತು ಶಿಕ್ಷಕಿ ಅನಿತಾ ಕುಮಾರಿ ನಡುವೆ ಈ ಗಲಾಟೆ ನಡೆದಿದೆ. ಸದ್ಯ ಜಗಳದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಲೆಯ ಇಬ್ಬರು ಶಿಕ್ಷಕಿಯರು ಪರಸ್ಪರ ಜಗಳವಾಡುತ್ತಿದ್ದರೆ, ಶಾಲಾ ಮಕ್ಕಳು ಮೂಕಪ್ರೇಕ್ಷಕರಂತೆ ಜಗಳ ವೀಕ್ಷಿಸುತ್ತಿದ್ದಾರೆ. ಅಲ್ಲದೆ ಶಾಲೆಯ ಒಳಗೆ ಆರಂಭವಾದ ಗಲಾಟೆ ಹೊರಗಿನ ಮೈದಾನದವರೆಗೂ ತಲುಪಿದೆ. ಕೆಳಗೆ ಬಿದ್ದುಕೊಂಡು ಮಣ್ಣಿನಲ್ಲೇ ಇಬ್ಬರು ಒದ್ದಾಡುತ್ತಾ ಗುದ್ದಾಡುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ.

ತರಗತಿಯಿಂದ ಒಬ್ಬರು ಹೊರಗೆ ಹೋಗುತ್ತಿರುವಾಗ ಮತ್ತೊಬ್ಬರು ಚಪ್ಪಲಿ ಹಿಡಿದುಕೊಂಡು ಓಡಿ ಬಂದು ಹೊಡೆದಾಗ ಜಗಳ ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಮತ್ತೊಬ್ಬ ಮಹಿಳೆಯು ಕೂಡ ಹೊಡೆದಿದ್ದಾರೆ.

ಈ ಘಟನೆಯ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿಯನ್ನು ಕೇಳಿದಾಗ, ಇದು ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹಂಗಾಮಿ ಮುಖ್ಯಶಿಕ್ಷಕಿ ಮತ್ತು ಸಹಾಯಕ ಶಿಕ್ಷಕಿಯ ನಡುವಿನ ವೈಯಕ್ತಿಕ ವಿವಾದದಿಂದ ಈ ವಾಗ್ವಾದ ಉಂಟಾಗಿದ್ದು, ಇದು ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಇಬ್ಬರೂ ಶಿಕ್ಷಕರಿಗೆ ವಿವರಣೆ ನೀಡಲು ಸಮನ್ಸ್ ನೀಡಲಾಗಿದೆ. ಅಧಿಕೃತ ಸೂಚನೆ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ