ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೀರಿಯಲ್ ಕಿಸ್ಸರ್: ಜಮುಯಿಯಲ್ಲಿ ಫೋನ್‌ನಲ್ಲಿ ಮಾತಾಡ್ತಾ ನಿಂತಿದ್ದ ಮಹಿಳೆಗೆ ಮುತ್ತಿಕ್ಕಿ ಪರಾರಿ; ವೀಡಿಯೊ ವೈರಲ್

Twitter
Facebook
LinkedIn
WhatsApp
ಸೀರಿಯಲ್ ಕಿಸ್ಸರ್: ಫೋನ್‌ನಲ್ಲಿ ಮಾತಾಡ್ತಾ ನಿಂತಿದ್ದ ಮಹಿಳೆಗೆ ಮುತ್ತಿಕ್ಕಿ ಪರಾರಿ

ಪಾಟ್ನಾ: ರಸ್ತೆ ಬದಿ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದ ಮಹಿಳೆಯೊಬ್ಬರಿಗೆ ಕಾಮುಕನೋರ್ವ ಓಡಿಬಂದು ಮಹಿಳೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಮುತ್ತಿಕ್ಕಿದ ಆಘಾತಕಾರಿ ಘಟನೆ ಬಿಹಾರದ ಜಮುಯಿಯಲ್ಲಿ (Jamui) ನಡೆದಿದೆ. ಈ ಕಾಮುಕನ ಅವಾಂತರ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜನ ಆಕ್ರೋಶ ವ್ಯಕ್ತಪಡಿಸಿದ್ದು ಈ ಸೀರಿಯಲ್ ಕಿಸ್ಸರ್ ಬಂಧನಕ್ಕೆ ಆಗ್ರಹಿಸಿದ್ದಾರೆ. 

ಹೀಗೆ ರೋಡ್ ರೋಮಿಯೋನಿಂದ ಕಿರುಕುಳಕ್ಕೊಳಗಾದ ಮಹಿಳೆ ಸ್ಥಳೀಯ ಆರೋಗ್ಯ ಕಾರ್ಯಕರ್ತೆಯಾಗಿದ್ದು(health worker), ಅವರು ಜಮುಯಿಯ ಸದರ್ ಆಸ್ಪತ್ರೆಯ ಹೊರಗೆ ರಸ್ತೆಯಲ್ಲಿ ನಿಂತುಕೊಂಡು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.  ಮಹಿಳೆ ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದರಾದರೂ ಸಾಧ್ಯವಾಗಿಲ್ಲ ಕಾಮುಕ ಆಕೆಯನ್ನು ಒತ್ತಾಯಪೂರ್ವಕವಾಗಿ ಸುಧೀರ್ಘವಾಗಿ ಚುಂಬಿಸಿ ಅಲ್ಲಿಂದ ಓಡಿ ಹೋಗಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ (Social Media)ವೈರಲ್ ಆಗುತ್ತಿದ್ದಂತೆ ಈ ರೋಡ್ ರೋಮಿಯೋನನ್ನು ಕೂಡಲೇ ಬಂಧಿಸುವಂತೆ ಜನ ಆಗ್ರಹಿಸಿದ್ದಾರೆ. 

ಈ ಅನಾಹುತದ ಸಣ್ಣ ನಿರೀಕ್ಷೆಯನ್ನು ಮಾಡಿರದ ಮಹಿಳೆ ಆತನಿಂದ ಬಿಡಿಸಿಕೊಳ್ಳಲು ಒದ್ದಾಡುವುದನ್ನು ಕಾಣಬಹುದು.  ಘಟನೆ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಈ ರೋಡ್‌ ರೋಮಿಯೋಗಾಗಿ ಬಲೆ ಬೀಸಿದ್ದಾರೆ.  ಈ ಬಗ್ಗೆ ಸುದ್ದಿಸಂಸ್ಥೆ ಆಜ್‌ತಕ್‌ನೊಂದಿಗೆ ಮಾತನಾಡಿದ ಮಹಿಳೆ ‘ಅವನು ಆಸ್ಪತ್ರೆಯ ಆವರಣಕ್ಕೆ ಏಕೆ ಬಂದನೆಂದು ನನಗೆ ತಿಳಿದಿಲ್ಲ. ನನಗೆ ಆ ಮನುಷ್ಯನ ಪರಿಚಯವೂ ಇಲ್ಲ. ನಾನು ಅವನಿಗೆ ಏನು ಮಾಡಿದೆ? ಅವನು ನನ್ನ ಮೇಲೆ ಹೀಗೆ ದೌರ್ಜನ್ಯವೆಸಗಿದಾಗ ನಾನು ವಿರೋಧಿಸಿ ಆಸ್ಪತ್ರೆಯ ಸಿಬ್ಬಂದಿಯನ್ನು ಕರೆದಿದ್ದೇನೆ. ಆದರೆ ಅಷ್ಟರಲ್ಲಾಗಲೇ ಆ ಖದೀಮ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ