ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ನೇಹಿತರಿಗೆ 1 ಲಕ್ಷ ರೂ. ಸಾಲ ಕೊಡಿಸಲು ಮಧ್ಯಸ್ಥಿಕೆ- ಕಿರುಕುಳದಿಂದ ಮಹಿಳೆ ಆತ್ಮಹತ್ಯೆ

Twitter
Facebook
LinkedIn
WhatsApp
ಸ್ನೇಹಿತರಿಗೆ 1 ಲಕ್ಷ ರೂ. ಸಾಲ ಕೊಡಿಸಲು ಮಧ್ಯಸ್ಥಿಕೆ- ಕಿರುಕುಳದಿಂದ ಮಹಿಳೆ ಆತ್ಮಹತ್ಯೆ

ಕೋಲಾರ: ಸ್ನೇಹಿತ (Friends) ರಿಗೆ 1 ಲಕ್ಷ ರೂಪಾಯಿ ಸಾಲ ಕೊಡಿಸಲು ಮಧ್ಯಸ್ಥಿಕೆ ವಹಿಸಲು ಹೋಗಿ ಸಾಲಗಾರರ ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಪದ್ಮಾ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ನನ್ನ ಸಾವಿಗೆ ಸ್ನೇಹಿತರೇ ಕಾರಣ ಎಂದು ವೀಡಿಯೋ ಮಾಡಿಟ್ಟು ಮಹಿಳೆ ವಿಷ ಸೇವನೆ ಮಾಡಿದ್ದಾರೆ.

ಘಟನೆ ವಿವರ: ಪದ್ಮಾ ಅವರು ದೇಶಿಹಳ್ಳಿಯ ವರಲಕ್ಷ್ಮಿ ಎಂಬವರಿಂದ ಸಾಲವನ್ನು ಪಡೆದು ತನ್ನ ಸ್ನೇಹಿತರಾದ ಅತ್ತಿಗಿರಿ ಗ್ರಾಮದ ಭಾಗ್ಯ ಮತ್ತು ಸಮ್ರತಿಗೆ ಸಾಲವಾಗಿ ಹಣ ಕೊಡಿಸಿದ್ದರು. ಆದರೆ ಇತ್ತೀಚೆಗೆ ಸಾಲದ ಹಣ ಹಾಗೂ ಬಡ್ಡಿ ವಾಪಸ್ ಮಾಡದ ಹಿನ್ನೆಲೆ ಕಿರುಕುಳ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಪದ್ಮಾ ಸಾವಿನ ದಾರಿ ಹಿಡಿದಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿರುವ ಪದ್ಮಾ, ನನ್ನ ಸಾವಿಗೆ ಸ್ನೇಹಿತರಾದ ಭಾಗ್ಯ, ಸಮ್ರತಿ, ಪ್ರೇಮ ಇವರು ಮೂರು ಜನರೇ ಕಾರಣ. ಸ್ನೇಹಿತರೆಂದು ನಂಬಿಕೆಯಿಟ್ಟು ಸಾಲ ಕೊಡಿಸಿದ್ದಕ್ಕೆ ನನ್ನ ತಲೆ ಮೇಲೆ ಹಾಕಿದ್ರು. ಪಾಪ ನನ್ನ ಮಕ್ಕಳು, ಗಂಡ ಅಮಾಯಕರು. ನಾನು ಸತ್ರೆ ನನ್ನ ಸ್ನೇಹಿತರೇ ಕಾರಣ ಎಂದು ವೀಡಿಯೋದಲ್ಲಿ ಪದ್ಮಾ ತಿಳಿಸಿದ್ದಾರೆ.

ಇದೀಗ ಸಾಲ ಪಡೆದಿದ್ದ ಭಾಗ್ಯ, ಸಮ್ರತಿ, ಪ್ರೇಮಾ ತಲೆ ಮರೆಸಿಕೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಅತ್ತಿಗಿರಿಕೊಪ್ಪ ಗ್ರಾಮದಲ್ಲಿ ಇದು 2 ನೇ ಪ್ರಕರಣವಗಿದೆ. ಸಾಲ ಪಡೆದಿದ್ದವರು ಹಾಗೂ ಕೊಟ್ಟವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೂದಿಕೋಟೆ ಪೊಲೀಸ್ ಠಾಣೆ (Budikote Police Station) ಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ