ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ

Twitter
Facebook
LinkedIn
WhatsApp
ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ

ದಾವಣಗೆರೆ (ಜ.26): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಯುವತಿಯರು ಹಾಗು ಯುವಕರ ನಡುವೆ ನಡೆದ ಜಗಳವನ್ನು ಬಿಡಿಸಲು ಮಧ್ಯೆ ಪ್ರವೇಶಿಸಿದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಯುವತಿ ಹಲ್ಲೆ ಮಾಡಿರುವ ಘಟನೆ ಕಳೆದ ದಿನ ತಡರಾತ್ರಿ ಜರುಗಿದೆ. ಇನ್ನು ಹಲ್ಲೇ ಮಾಡಿದ ಬೇನಲ್ಲೇ ಮಹಿಳಾ ಪೋಲಿಸ್ ಕಾನ್ಸ್‌ಟೇಬಲ್‌ಗೆ ಕೈಗೆ ಗಾಯಗಳಾಗಿದ್ದು, ಘಟನೆ ಸಂಬಂಧ ಪೋಲಿಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. 

 

ಇನ್ನು ಈ ಘಟನೆ ದಾವಣಗೆರೆಯ ವಿದ್ಯಾನಗರದ ಕೊನೆ ಬಸ್ ಸ್ಟಾಪ್ ಬಳಿ ಕಳೆದ ದಿನ‌ತಡರಾತ್ರಿ ಜರುಗಿದೆ. ಇಬ್ಬರು ಯುವತಿಯರು, ಮಂಜುನಾಥ ಮತ್ತು ಹರ್ಷಾ ಎಂಬುವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮಹಾರಾಷ್ಟ್ರ ಮೂಲದ  ಯುವತಿಯರನ್ನು ನಗರಕ್ಕೆ ಕರೆಸಿ ವೇಶ್ಯಾವಾಟಿಕೆಗೆ ತಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಕೊಡಮಾಡುವ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯ ಹಿನ್ನಲ್ಲೇ ಹಿಂದೆ ಹೈಟೆಕ್ ವೇಶ್ಯಾವಾಟಿಕೆ ಕರಿನೆರಳು: ದಾವಣಗೆರೆಯ ಯೋಗೀಶ್, ಕುಮಾರ್ ನಾಯ್ಕ್, ಹೇಮರಾಜ್ ಅವರ ಜೊತೆ ಪೋನ್ ಸಂಪರ್ಕದಲ್ಲಿದ್ದ ಮಹಾರಾಷ್ಟ್ರ ಮೂಲದ ಯುವತಿಯರು ದಾವಣಗೆರೆಗೆ ಆಗಮಿಸಿದ್ದರು. ಮಂಗಳವಾರ ತಡ ರಾತ್ರಿ ಗಿರಾಕಿಗಳಾದ ಶಿವಮೊಗ್ಗ ಮೂಲದ ಹರೀಶ್ ಮತ್ತು ಮಂಜುನಾಥ್ ಜೊತೆ ವಿದ್ಯಾನಗರದ ಲಾಸ್ಟ್ ಬಸ್‌ಸ್ಟಾಪ್‌ನಲ್ಲಿ ಕಿತ್ತಾಡಿಕೊಂಡಿದ್ದಾರೆ. 

ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಪೊಲೀಸರು. ಜಗಳ ಬಿಡಿಸಲು ಮುಂದಾದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆ ವೇಳೆ ಓರ್ವ ಮಹಿಳಾ ಪೊಲೀಸ್ ಕಾನ್ಸಟೇಬಲ್‌ಗೆ ಗಾಯವಾಗಿದ್ದು, ಕುಡಿದ ಮತ್ತಿನಲ್ಲಿದ್ದ ಯುವತಿಯರು ಗಲಾಟೆ ಎಬ್ಬಿಸಿ ರಾದ್ದಾಂತ ಮಾಡಿದ್ದಾರೆ. ಕೊನೆಗೆ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಎಸ್ಪಿ ಸಿಬಿ‌ ರಿಷ್ಯಂತ್ ಹೇಳಿದ್ದೇ‌ನು?: ವಿದ್ಯಾನಗರ ಠಾಣೆ ಆಗಮಿಸಿದ ಇಬ್ಬರು ಯುವತಿಯರು ಹುಡುಗರು ತೊಂದರೆ ಕೊಡ್ತಿದ್ದಾರೆಂದು ದೂರುಕೊಡಲು ಮುಂದಾಗಿದ್ರು, ವಿಚಾರಣೆ ನಡೆಸಿದಾಗ ಪೋಲಿಸರ ಮೇಲೆ ಹಲ್ಲೆ ನಡೆಸಿದ್ದರು, ವಿಚಾರಣೆ ನಡೆಸಿದಾಗ ಅವರಿಬ್ಬರೂ ಮುಂಬೈ ಮೂಲದ ಯುವತಿಯರು, ಯೋಗೆಶ್ ಎಂಬುವನು ಮುಂಬೈನಿಂದ ಇಬ್ಬರು ಯುವತಿಯರನ್ನು ಕರೆದುಕೊಂಡು ಬಂದಿದ್ದಾ, ಯುವತಿರನ್ನು ಬಳಸಿಕೊಂಡಿದ್ದಾರೆ ಎಂದು ಯುವತಿಯರು ವಿಚಾರಣೆಯಲ್ಲಿ ಮಾಹಿತಿ ನೀಡಿದ ಬೆನ್ನಲ್ಲೇ ಯೋಗೇಶ್, ಕುಮಾರ್ ನಾಯ್ಕ್, ಹೇಮರಾಜ್ ವಿರುದ್ಧ ಹಾಗು ಪೋಲಿಸರ ಮೇಲೆ ಹಲ್ಲೆ‌ ಮಾಡಿದ ಯುವತಿಯರ ಮೇಲೆ ಎರಡು ಪ್ರಕರಣ ದಾಖಲಾಗಿದೆ. ಇನ್ನು ಇವೆಂಟ್ ಮ್ಯಾನೇಜ್ಮೆಂಟ್‌ಗೆ ಕರೆಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ತನಿಖೆ ಬಳಿಕ ಮಾಹಿತಿ ಹೊರಬರಬೇಕಿದೆ ಎಂದು ಎಸ್ಪಿ ಸಿಬಿ ರಿಷ್ಯಂತ್ ಮಾಹಿತಿ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ