ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಂಗನವಾಡಿಯಲ್ಲಿ ಬಿಸಿ ಸಾಂಬಾರ್ ಬಿದ್ದು 6 ವರ್ಷದ ಬಾಲಕಿ ಗಂಭೀರ

Twitter
Facebook
LinkedIn
WhatsApp
ಅಂಗನವಾಡಿಯಲ್ಲಿ ಬಿಸಿ ಸಾಂಬಾರ್ ಬಿದ್ದು 6 ವರ್ಷದ ಬಾಲಕಿ ಗಂಭೀರ

ಮಂಡ್ಯ: ಅಂಗನವಾಡಿಯಲ್ಲಿ (Anganwadi) ಆರು ವರ್ಷದ ಬಾಲಕಿಯ (Girl) ಮುಖ ಹಾಗೂ ಬೆನ್ನಿನ ಭಾಗಕ್ಕೆ ಬಿಸಿ ಸಾಂಬಾರ್ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಮಾತನಾಡಲು ಹಾಗೂ ಊಟ ಮಾಡಲು ಆಗದ ಸ್ಥಿತಿಯಲ್ಲಿ ಬಾಲಕಿ ಇರುವ ಮನಕಲಕುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಕಳೆದ ಸೋಮವಾರ ಹೆಮ್ಮನಹಳ್ಳಿ ಅಂಗನವಾಡಿಯಲ್ಲಿ ನಿಹಾರಿಕಾ ಎಂಬ ಬಾಲಕಿಗೆ ಬಿಸಿ ಸಾಂಬಾರ್ ಇದ್ದ ಪರಿಣಾಮ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಅಂದು ಊಟದ ಸಮಯದಲ್ಲಿ ನಿಹಾರಿಕಾ ವಾಟರ್ ಬಾಟಲ್ ತರಲು ಓಡಿ ಹೋಗಿದ್ದಾಳೆ. ಆ ಕಡೆಯಿಂದ ಅಂಗನವಾಡಿಯ ಆಯಾ ಲಕ್ಷ್ಮಿ ಮಕ್ಕಳಿಗೆ ಊಟ ಬಡಿಸಲು ಬಿಸಿ ಸಾಂಬಾರ್‌ನ್ನು ತರುತ್ತಿದ್ದ ವೇಳೆ ಇಬ್ಬರ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಆಯಾ ಕೈಯಲ್ಲಿ ಇದ್ದ ಬಿಸಿ ಸಾಂಬಾರ್ ನಿಹಾರಿಕಾಳ ಮುಖ ಹಾಗೂ ಬೆನ್ನಿನ ಭಾಗಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಸುಟ್ಟ ಗಾಯಗಳು ಆಗಿವೆ.

ದಾವಣಗೆರೆ (Davanagere) ಮೂಲದ ಮಂಜುನಾಥ್ ಮತ್ತು ಪೂಜಾ ಎಂಬ ದಂಪತಿ ತಮ್ಮ 6 ವರ್ಷದ ಮಗಳು‌ ನಿಹಾರಿಕಾಳೊಂದಿಗೆ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡಲು ಮದ್ದೂರಿಗೆ ಬಂದಿದ್ದರು. ಹೆಮ್ಮನಹಳ್ಳಿಯಲ್ಲಿ ಕಳೆದ 5 ತಿಂಗಳಿನಿಂದ ಮನೆ ಮಾಡಿಕೊಂಡು ಊರೂರಿಗೆ ತೆರಳಿ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ಮಗಳು ನಿಹಾರಿಕಾ ನಮ್ಮ ಜೊತೆ ಬರೋದು ಬೇಡಾ ಎಂದು ಅಂಗನವಾಡಿಗೆ ಪೋಷಕರು ಬಿಟ್ಟು ಹೋಗುತ್ತಾ ಇದ್ದರು. ಅದೇ ರೀತಿ ಸೋಮವಾರ ನಿಹಾರಿಕಾಳನ್ನು ಅಂಗನವಾಡಿಗೆ ಬಿಟ್ಟ ವೇಳೆ ಈ ಘಟನೆ ಜರುಗಿದೆ. 

ಸದ್ಯ ನಿಹಾರಿಕಾಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಆಕೆಯ ಮುಖದ ಭಾಗಕ್ಕೆ ಸಾಂಬಾರ್ ಬಿದ್ದಿರುವ ಕಾರಣ ತೀವ್ರ ಗಾಯಗಳಾಗಿ ಮಾತನಾಡಲು ಹಾಗೂ ಊಟ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಬಾಲಕಿ ಇದ್ದಾಳೆ. ಇನ್ನೂ ಅಧಿಕಾರಿಗಳು ಒಮ್ಮೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿದ್ದು ಬಿಟ್ಟರೆ, ನಿಹಾರಿಕಾಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವಲ್ಲಿ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist