ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!

Twitter
Facebook
LinkedIn
WhatsApp
ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!

ಇದೀಗ ಅದರ ಫಲವಾಗಿ ವಿರಾಟ್ ಕೊಹ್ಲಿ ದಂಡದ ಭಾರ ಹೊರಬೇಕಾಗಿ ಬಂದಿದೆ. ವಾಸ್ತವವಾಗಿ ನಿನ್ನೆಯ ಪಂದ್ಯದಲ್ಲಿ ಅಂಪೈರ್ ನೀಡಿದ ತೀರ್ಪಿನ ಅಸಮಾಧಾನ ಹೊರಹಾಕಿದ್ದ ಕೊಹ್ಲಿ, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಅವರ ಈ ನಡುವಳಿಕೆಯ ವಿರುದ್ಧ ಬಿಸಿಸಿಐ ಕ್ರಮ ಕೈಗೊಂಡಿದೆ.

ಅದರಂತೆ ಕೊಹ್ಲಿ ಪಂದ್ಯ ಶುಲ್ಕದ 50 ಪ್ರತಿಶತ ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಾಗಿದೆ. ಈ ಮೂಲಕ ನಿನ್ನೆ ನಡೆದ ಎರಡು ಪಂದ್ಯಗಳಲ್ಲಿ ಮೂವರು ಆಟಗಾರರು ದಂಡಕ್ಕೊಳಗಾದಂತ್ತಾಗಿದೆ. ಕೊಹ್ಲಿಗೂ ಮುನ್ನ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ನಿಧಾನಗತಿಯ ಓವರ್​ನಿಂದಾಗಿ ದಂಡಕ್ಕೊಳಗಾಗಿದ್ದರು.

ವಾಸ್ತವವಾಗಿ ಕೆಕೆಆರ್ ನೀಡಿದ 223 ರನ್‌ಗಳ ಗುರಿ ಬೆನ್ನತ್ತಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಆದರೆ ಇನ್ನಿಂಗ್ಸ್​ನ ಮೂರನೇ ಓವರ್​ ಬೌಲ್ ಮಾಡಲು ದಾಳಿಗಿಳಿದ ಹರ್ಷಿತ್ ರಾಣಾ ಎಸೆದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಪತನವಾಯಿತು.

ರಾಣಾ ಬೌಲ್ ಮಾಡಿದ ಆ ಎಸೆತ ನಿಧಾನಗತಿಯ ಫುಲ್ ಟಾಸ್‌ ಬಾಲ್ ಆಗಿತ್ತು. ಈ ವೇಳೆ ಗೊಂದಲಕ್ಕೀಡಾದ ವಿರಾಟ್, ಆ ಎಸೆತವನ್ನು ಡಿಫೆಂಡ್ ಮಾಡಲು ಯತ್ನಿಸಿದರು. ಆದರೆ ಚೆಂಡು ಕೊಹ್ಲಿಯ ಬ್ಯಾಟ್​ಗೆ ತಗುಲಿ ಮೇಲೆ ಹೋಯಿತು. ಬೌಲರ್ ಹರ್ಷಿತ್ ರಾಣಾ ಸುಲಭ ಕ್ಯಾಚ್ ತೆಗೆದುಕೊಂಡರು.

ಅಂಪೈರ್ ಕೂಡ ಔಟೆಂದು ತೀರ್ಪು ನೀಡಿದರು. ಆದರೆ ಅಂಪೈರ್ ನಿರ್ಧಾರದ ವಿರುದ್ಧ ಶಾಕ್​ಗೆ ಒಳಗಾದ ಕೊಹ್ಲಿ, ರಿವ್ಯೂ ತೆಗೆದುಕೊಂಡರು. ಇಲ್ಲಿ ಮೂರನೇ ಅಂಪೈರ್ ಕೂಡ ಕೊಹ್ಲಿ ಔಟೆಂದು ತೀರ್ಪು ನೀಡಿದರು. ಇದರಿಂದ ಕೋಪಗೊಂಡ ಕೊಹ್ಲಿ, ಫೀಲ್ಡ್ ಅಂಪೈರ್​ ಜೊತೆ ಕೆಲ ಸಮಯ ವಾಗ್ವಾದ ನಡೆಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist