ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಟೋಬರ್‌ ವೇಳೆಗೆ ತಾಲೂಕು ಪಂಚಾಯತ್‌- ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆ

Twitter
Facebook
LinkedIn
WhatsApp
ಅಕ್ಟೋಬರ್‌ ವೇಳೆಗೆ ತಾಲೂಕು ಪಂಚಾಯತ್‌- ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆ

ಬೆಂಗಳೂರು: ಸೀಮಾ ನಿರ್ಣಯ ಆಯೋಗದ ಸದ್ಯದ ಕಾರ್ಯವೈಖರಿ ಗಮನಿಸಿದರೆ ರಾಜ್ಯದ ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ಗಳಿಗೆ ಅಕ್ಟೋಬರ್‌ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತಿವೆ.

ತಾ.ಪಂ-ಜಿ.ಪಂ ಸದಸ್ಯ ಕ್ಷೇತ್ರಗಳ ಗಡಿಗಳನ್ನು ನಿರ್ಣಯಿಸುವ ಕಾರ್ಯಕ್ಕೆ ನೇಮಿಸಲಾದ ಸೀಮಾ ನಿರ್ಣಯ ಆಯೋಗ ಕಳೆದ ವರ್ಷ ಅಕ್ಟೋಬರ್‌ನಿಂದ ಕಾರ್ಯಾರಂಭ ಮಾಡಿದೆ.

ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಗೆ ಹೈಕೋರ್ಟ್‌ 12 ವಾರಗಳ ಗಡುವು ನೀಡಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ಮತ್ತಷ್ಟು ವೇಗ ನೀಡಿರುವ ಸೀಮಾ ನಿರ್ಣಯ ಆಯೋಗ, ಕ್ಷೇತ್ರಗಳ ಗಡಿ ನಿರ್ಣಯಕ್ಕೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ ಜಿಲ್ಲೆಗಳಿಂದ ಕರಡು ಪ್ರಸ್ತಾವನೆಗಳನ್ನು ತರಿಸಿಕೊಳ್ಳುತ್ತಿದೆ.

ಈಗಾಗಲೇ 20ಕ್ಕೂ ಹೆಚ್ಚು ಜಿಲ್ಲೆಗಳಿಂದ ತಾ.ಪಂ. ಜಿ.ಪಂ. ಕ್ಷೇತ್ರಗಳ ಗಡಿ ನಿರ್ಣಯಕ್ಕೆ ಸಂಬಂಧಿಸಿದ ಕರಡು ಪ್ರಸ್ತಾವನೆಗಳು ಸೀಮಾ ನಿರ್ಣಯ ಆಯೋಗಕ್ಕೆ ಜಿಲ್ಲಾಧಿಕಾರಿಗಳಿಂದ ಸಲ್ಲಿಕೆಯಾಗಿದೆ. ಇನ್ನೂ 10 ಜಿಲ್ಲೆಗಳಿಂದ ಕರಡು ಪ್ರಸ್ತಾವನೆ ಬರಲಿಕ್ಕಿದ್ದು, ಈ ತಿಂಗಳಾಂತ್ಯಕ್ಕೆ ಕ್ಷೇತ್ರಗಳ ಗಡಿಗಳ ಕರಡು ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ಕೊಟ್ಟು, ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸುವ ಕೆಲಸ ನಡೆಯಲಿದೆ. ಇದಕ್ಕಾಗಿ ಸೀಮಾ ನಿರ್ಣಯ ಆಯೋಗ ಎಲ್ಲಾ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದೆ. ಅದಾದ ಬಳಿಕ ಕ್ಷೇತ್ರಗಳ ಗಡಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಅದರಂತೆ ಜುಲೈ ಅಂತ್ಯಕ್ಕೆ ತಾ.ಪಂ-ಜಿ.ಪಂ ಕ್ಷೇತ್ರಗಳ ಗಡಿಗಳು ಅಂತಿಮಗೊಳ್ಳಲಿವೆ ಎಂದು ಆಯೋಗದ ಮೂಲಗಳು ಹೇಳಿವೆ.

ಸ್ವತಃ ಸರಕಾರವೇ ಮೀಸಲಾತಿಯನ್ನು ನಿಗದಿಪಡಿಸಬಹುದು ಅಥವಾ ಸೀಮಾ ನಿರ್ಣಯ ಆಯೋಗಕ್ಕೆ ಅದನ್ನು ವಹಿಸಬಹುದು. ಕರಡು ಮೀಸಲಾತಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಕನಿಷ್ಠ 15 ದಿನ ಕಾಲಾವಕಾಶ ಕೊಟ್ಟು ಆಕ್ಷೇಪಣೆಗಳು ಆಲಿಸಿದ ಬಳಿಕ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗಲಿದೆ.

ಚುನಾವಣೆ ನಡೆಸಲು ಕನಿಷ್ಟ 45 ದಿನ ಬೇಕು
ಸೀಮಾ ನಿರ್ಣಯ ಆಯೋಗ ಮತ್ತು ನ್ಯಾ| ಭಕ್ತವತ್ಸಲ ಆಯೋಗದ ಕೆಲಸ ಮುಗಿದ ಬಳಿಕ ರಾಜ್ಯ ಚುನಾವಣಾ ಆಯೋಗ ಕೆಲಸ ಆರಂಭವಾಗಲಿದೆ. ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳ ಗಡಿಗಳನ್ನು ಅಂತಿಮಗೊಳಿಸಿದರೆ, ಚುನಾವಣ ಆಯೋಗ ಮತದಾರರ ಪಟ್ಟಿ ಸಿದ್ದಪಡಿಸುವ ಕೆಲಸ ಆರಂಭಿಸಲಿದೆ.

ಮೀಸಲಾತಿ ಅಂತಿಮಗೊಳ್ಳುವುದರೊಳಗೆ ಮತದಾರರ ಪಟ್ಟಿ ಸಿದ್ದಪಡಿಸುವ ಕೆಲಸ ಮುಗಿಯಲಿದೆ. ಮೀಸಲಾತಿ ಅಂತಿಮವಾದ ಬಳಿಕ ತಾ.ಪಂ. ಜಿ.ಪಂ.ಗಳಿಗೆ ಚುನಾವಣೆ ನಡೆಸಲು ಕನಿಷ್ಠ 45 ದಿನ ಬೇಕು. ಎಲ್ಲ ಜಿ.ಪಂ.-ತಾ.ಪಂ.ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿರುವ ಕಾರಣ ಬಹುತೇಕ ಎರಡು ಹಂತಗಳಲ್ಲಿ ಚುನಾವಣೆ ನಡೆಸಬೇಕಾಗಬಹುದು ಎಂದು ರಾಜ್ಯ ಚುನಾವಣ ಆಯೋಗದ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ