ಗುರುವಾರ, ಮೇ 16, 2024
ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

Twitter
Facebook
LinkedIn
WhatsApp
PTI1 7 2017 000189A 1

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ