ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತ್ಯಾಚಾರ ಪ್ರಕರಣದಲ್ಲಿ ಲಂಕಾ ಕ್ರಿಕೆಟಿಗನಿಗೆ ಜಾಮೀನು; 1 ಕೋಟಿ ರೂ. ಠೇವಣಿ.. ಹಲವಾರು ಶರತ್ತು..!

Twitter
Facebook
LinkedIn
WhatsApp
ಅತ್ಯಾಚಾರ ಪ್ರಕರಣದಲ್ಲಿ ಲಂಕಾ ಕ್ರಿಕೆಟಿಗನಿಗೆ ಜಾಮೀನು; 1 ಕೋಟಿ ರೂ. ಠೇವಣಿ.. ಹಲವಾರು ಶರತ್ತು..!

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪ ಹೊತ್ತು ಆಸ್ಟ್ರೇಲಿಯದಲ್ಲಿ ಬಂಧನಕ್ಕೊಳಗಾಗಿದ್ದ ಶ್ರೀಲಂಕಾ ಕ್ರಿಕೆಟಿಗ ಧನುಷ್ಕಾ ಗುಣತಿಲಕಗೆ (Danushka Gunathilaka) ಅಂತಿಮವಾಗಿ ಜಾಮೀನು ಮಂಜೂರಾಗಿದೆ. ಅತ್ಯಾಚಾರದ ಆರೋಪದ ಮೇಲೆ ಗುಣತಿಲಕ ಅವರನ್ನು ನವೆಂಬರ್ 6 ರ ಮಧ್ಯರಾತ್ರಿಯಂದು ಸಿಡ್ನಿಯ ಪೊಲೀಸರು ಹೋಟೆಲ್‌ನಿಂದ ಬಂಧಿಸಿ, ಜೈಲಿಗಟ್ಟಿದ್ದರು. ಈಗ ಗುಣತಿಲಕ ಶ್ರೀಲಂಕಾ ಕ್ರಿಕೆಟ್ (Sri Lanka Cricket) ಸಂಸ್ಥೆ ನೆರವಿನಿಂದ ಜಾಮೀನು ಪಡೆದಿದ್ದು, ಇದಕ್ಕಾಗಿ 1 ಕೋಟಿ ಠೇವಣಿ ಕೂಡ ಇರಿಸಿಕೊಳ್ಳಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತನ್ನ ಕೊನೆಯ ಪಂದ್ಯವನ್ನು ಇಂಗ್ಲೆಂಡ್‌ನೊಂದಿಗೆ ಆಡಿದ್ದು, ಅದರಲ್ಲಿ ಸೋಲನ್ನು ಎದುರಿಸಬೇಕಾಯಿತು. ಆದರೆ, ಗುಣತಿಲಕ ಗಾಯದ ಸಮಸ್ಯೆಯಿಂದ ಈ ಪಂದ್ಯಕ್ಕೂ ಮುನ್ನ ತಂಡದಿಂದ ಹೊರಗುಳಿದಿದ್ದರು. ಅವರ ಬದಲಿಗೆ ಬೇರೆ ಆಟಗಾರನನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ನಂತರ ಟೀಮ್ ಮ್ಯಾನೇಜ್ ಮೆಂಟ್ ಸಲಹೆ ಮೇರೆಗೆ ಗುಣತಿಲಕ ಅಲ್ಲಿಯೇ ಉಳಿದಿದ್ದರು. ಧನುಷ್ಕಾ ಗುಣತಿಲಕ ಅವರನ್ನು ಡೇಟಿಂಗ್ ಆಪ್ ಮೂಲಕ ಭೇಟಿಯಾದ 29 ವರ್ಷದ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದರು.

ಜಾಮೀನು ನೀಡಲು ನಿರಾಕರಿಸಿದ್ದ ನ್ಯಾಯಾಲಯ

ಮಹಿಳೆಯ ಆರೋಪದ ನಂತರ ಧನುಷ್ಕಾ ಗುಣತಿಲಕ ಅವರನ್ನು ಸಿಡ್ನಿಯ ಸಸೆಕ್ಸ್ ಸ್ಟ್ರೀಟ್ ಹೋಟೆಲ್‌ನಿಂದ ಬಂಧಿಸಲಾಯಿತು. ಆತನ ಬಂಧನದ ನಂತರ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡ್ನಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜಾಮೀನು ಇಲ್ಲೇ ಆಗುತ್ತದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಆಗ ಕೋರ್ಟ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.

11 ದಿನ ಜೈಲಿನಲ್ಲಿ ವಾಸ

ಆದರೆ, 11 ದಿನಗಳ ಕಾಲ ಜೈಲುವಾಸ ಅನುಭವಿಸಿದ ಗುಣತಿಲಕ ಈಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಅವರಿಗೆ ಸಿಡ್ನಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಈ ಸುದ್ದಿ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಕೊಂಚ ನೆಮ್ಮದಿ ನೀಡಲಿದೆ. ಏಕೆಂದರೆ ಆಸ್ಟ್ರೇಲಿಯದ ಕಾನೂನಿನ ಪ್ರಕಾರ ಒಂದು ವೇಳೆ ಆರೋಪ ಸತ್ಯವೆಂದು ಸಾಭೀತಾದರೆ ಅವರಿಗೆ ಜೀವವಾದಿ ಶಿಕ್ಷೆ ಖಚಿತವಾಗುತ್ತಿತ್ತು. ಗುಣತಿಲಕಗೆ ಜಾಮೀನೇನೊ ಸಿಕ್ಕಿದೆ. ಆದರೆ, 1 ಕೋಟಿ ರೂ. ಮೊತ್ತವನ್ನು ಅವರು ಠೇವಣಿ ರೂಪದಲ್ಲಿ ನ್ಯಾಯಾಲಯಕ್ಕೆ ಕಟ್ಟಬೇಕಿದೆ. ಹಾಗೆಯೇ ಟಿಂಡರ್ ಅಥವಾ ಯಾವುದೇ ಇತರ ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸದಿರುವುದು ಸೇರಿದಂತೆ ವಿವಿಧ ಷರತ್ತುಗಳನ್ನು ಸಹ ವಿಧಿಸಲಾಗಿದೆ.

ಸಂತ್ರಸ್ತೆಯ ದೂರಿನಲ್ಲಿ ಏನಿತ್ತು?

ಅತ್ಯಾಚಾರದ ಆರೋಪ ಹೊರಿಸಿದ್ದ ಮಹಿಳೆ ತಾನು ನೀಡಿದ್ದ ದೂರಿನಲ್ಲಿ, ನಾನು ಹಾಗೂ ಶ್ರೀಲಂಕಾ ಕ್ರಿಕೆಟಿಗ ಧನುಷ್ಕಾ ಗುಣತಿಲಕ ಟಿಂಡರ್‌ ಆಪ್​ನಲ್ಲಿ ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡಿದ್ದೇವು. ಆ ಬಳಿಕ ಇಬ್ಬರು ಡೇಟಿಂಗ್​ಗಾಗಿ ಭೇಟಿಯಾದವು. ಲೈಂಗಿಕ ಕ್ರಿಯೆ ವೇಳೆ ಗುಣತಿಲಕ ಕಾಂಡೋಮ್ ಧರಿಸಲು ನಿರಾಕರಿಸಿದನು. ಹಾಗೆಯೇ ನಾನು ಕಾಂಡೋಮ್ ಧರಿಸುವಂತೆ ಒತ್ತಾಯಿಸಿದಾಗ ಅವರು ನನ್ನ ಕುತ್ತಿಗೆಯನ್ನು ಮೂರು ಬಾರಿ ಭಿಗಿಯಾಗಿ ಹಿಡಿದುಕೊಂಡು ಉಸಿರುಗಟ್ಟಿಸಲು ಪ್ರಯತ್ನಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆಯೂ ವಿವಾದಗಳಲ್ಲಿ ಭಾಗಿ

ಅಂದಹಾಗೆ, ಧನುಷ್ಕಾ ಗುಣತಿಲ್ಕಾ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. 2018 ರಲ್ಲಿ ತನ್ನ ಗೆಳೆಯನೊಂದಿಗೆ ಸೇರಿ ನಾರ್ವೆ ದೇಶದ ಮಹಿಳೆಯ ಮೇಲೆ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದಡಿ ಅವರನ್ನು 6 ಪಂದ್ಯಗಳಿಂದ ಅಮಾನತುಗೊಳಿಸಲಾಗಿತ್ತು. ಈಗ ಆಸ್ಟ್ರೇಲಿಯದಲ್ಲಿ ಅತ್ಯಾಚಾರದ ಆರೋಪದಲ್ಲಿ ಬಂಧನಕ್ಕೊಳಗಾದ ಬಳಿಕ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಗುಣತಿಲಕ ಅವರನ್ನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿಷೇಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ