ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಗೋವಾದ ಪತ್ರಕರ್ತ ತರುಣ್ ತೇಜ್ಪಾಲ್ ಅವರನ್ನು ಆರೋಪಮುಕ್ತ ಎಂದು ಘೋಷಿಸಿ, ಪ್ರಕರಣದಿಂದ ಖುಲಾಸೆಗೊಳಿಸಿ ಗೋವಾ ನ್ಯಾಯಾಲಯ ತೀರ್ಪು ನೀಡಿದೆ.
ತೆಹಲ್ಕಾ ಮ್ಯಾಗಜಿನ್ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರು ತಮ್ಮ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿಲಾಗಿತ್ತು. ಜಾಮೀನು ಪಡೆದು ಬಂಧನದಿಂದ ಹೊರ ಬಂದಿದ್ದ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
2013ರಲ್ಲಿ ನಡೆದ ಸಮ್ಮೇಳನದ ಸಮಯದಲ್ಲಿ ತಮ್ಮ ಮ್ಯಾಗಜಿನ್ನ ಕಿರಿಯ ಸಹೋದ್ಯೋಗಿ ಮೇಲೆ ಗೋವಾದ ಪಂಚತಾರಾ ರೆಸಾರ್ಟ್ನ ಲಿಫ್ಟ್ನಲ್ಲಿ ತೇಜ್ಪಾಲ್ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿತ್ತು.
ಆರೋಪಕ್ಕೆ ಸಂಬಂಧಿಸಿದಂತೆ ತೇಜ್ಪಾಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿತ್ತು.
ತಮ್ಮ ಮೇಲಿನ ಆರೋಪದ ವಿರುದ್ದ ತೇಜ್ ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.