ವಿಶೇಷ ನೇಮಕದಡಿ ಆಯುಷ್ ವೈದ್ಯರ ನಿಯೋಜನೆ: ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕಾಯಂಗೊಳಿಸುವುದು ಕಷ್ಟ. ಆದರೆ, ಅವರನ್ನು ವಿಶೇಷ ನೇಮಕಾತಿಯಡಿ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಲೋಪತಿ ವೈದ್ಯರನ್ನು ವಿಶೇಷ ನೇಮಕಾತಿಯಡಿಯಲ್ಲಿ ನಿಯೋಜನೆಗೆ ಕ್ರಮ ಕೈಗೊಂಡಂತೆ ಆಯುಷ್ ಇಲಾಖೆಯಲ್ಲಿ ಗುತ್ತಿಗೆ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಒಂದು ಗ್ರೇಸ್ ಅಂಕ ನೀಡಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವೈದ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಆಯುಷ್ ಇಲಾಖೆಗೆ ಸರ್ಕಾರವು ಹೆಚ್ಚು ಉತ್ತೇಜನ ನೀಡಲಾಗುತ್ತಿದ್ದು, 903 ಹುದ್ದೆಗಳು ಮಂಜೂರಾಗಿವೆ. ಈಪೈಕಿ 694 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗಿದೆ. 209 ಹುದ್ದೆಗಳು ಖಾಲಿ ಇವೆ. ಇದರಲ್ಲಿ 44 ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ವೈದ್ಯರನ್ನು ನಿಯೋಜನೆ ಮಾಡಲಾಗಿದೆ. ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೇ, ರಾಜ್ಯದಲ್ಲಿ 2011-12ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 2011-12ನೇ ಸಾಲಿನಲ್ಲಿ 109 ವೈದ್ಯರು ಮತ್ತು 2018-19ನೇ ಸಾಲಿನಲ್ಲಿ 22 ವೈದ್ಯರನ್ನು ನೇಮಕ ಮಾಡಲಾಗಿದ್ದು, ಒಟ್ಟು 131 ವೈದ್ಯರು ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist