ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನುಮತಿ ಇಲ್ಲದೆ 200 ದಿನ ರಜೆ ತೆಗೆದುಕೊಂಡ ಪೊಲೀಸ್‌; ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ 2ನೇ ಮದುವೆ!

Twitter
Facebook
LinkedIn
WhatsApp
ಅನುಮತಿ ಇಲ್ಲದೆ 200 ದಿನ ರಜೆ ತೆಗೆದುಕೊಂಡ ಪೊಲೀಸ್‌; ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ 2ನೇ ಮದುವೆ!

ನೋಯ್ಡಾ: ಅನುಮತಿ ಇಲ್ಲದೆ ಸುಮಾರು 200 ದಿನಗಳವರೆಗೆ ಕೆಲಸಕ್ಕೆ ಗೈರಾಗಿದ್ದ ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರನ್ನು ಕರ್ತವ್ಯದಿಂದಲೇ ವಜಾಗೊಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 30 ವರ್ಷದ ಚಿತ್ರಸೇನ್ ಕುಮಾರ್ ಅವರನ್ನು ನೋಯ್ಡಾದ ಗೌತಮ್ ಬುದ್ಧ ನಗರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಅವರನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೌತಮ್‌ ಬುದ್ದ ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಚಿತ್ರಸೇನ್ 2020ರ ಜುಲೈ 25ರಿಂದ 2021ರ ಫೆಬ್ರವರಿ 3ರವರೆಗೆ ಒಟ್ಟು 193 ದಿನಗಳ ಕಾಲ ಅನುಮತಿ ಇಲ್ಲದೆ ರಜೆ ತೆಗೆದುಕೊಂಡಿದ್ದ. ಈ ಅವಧಿಯಲ್ಲಿ ಆತ 2ನೇ ಮದುವೆ ಆಗಿದ್ದಾನೆ ಅನ್ನೋ ಮಾಹಿತಿ ಸಹ ಬಹಿರಂಗವಾಗಿದೆ.


ಮೊದಲ ಹೆಂಡತಿ ಜೀವಂತವಾಗಿರುವಾಗಲೇ ಚಿತ್ರಸೇನ್ ಬೇರೊಂದು ಮದುವೆಯಾಗಿದ್ದಾನೆ. 2012ರಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಚಿತ್ರಸೇನ್ ಉತ್ತರಪ್ರದೇಶ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮನಸ್ಸಿಗೆ ಬಂದಂತೆ ರಜೆ ತೆಗೆದುಕೊಂಡು ಕರ್ತವ್ಯಲೋಪ ಎಸಗಿದ್ದಾನೆ. ಅನುಮತಿ ಇಲ್ಲದೆ 193 ದಿನಗಳ ಕಾಲ ಕೆಲಸಕ್ಕೆ ಗೈರುಹಾಜರಾಗಿರುವ ಆತನ ವಿರುದ್ಧ ಸರ್ಕಾರಿ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘ಕಾನ್ಸ್ಟೇಬಲ್ ಚಿತ್ರಸೇನ್ ತನ್ನ ಮೊದಲ ಹೆಂಡತಿ ಬದುಕಿರುವಾಗಿರುವಾಗಲೇ 2ನೇ ಬಾರಿಗೆ ಮದುವೆಯಾಗಿದ್ದಾನೆ. ಮದುವೆಗೆ ಸಂಬಂಧಿಸಿದಂತೆ ಆತ 1956ರ ಉತ್ತರ ಪ್ರದೇಶ ಸರ್ಕಾರಿ ಸೇವಕ ನಡವಳಿಕೆ ನಿಯಮಗಳ ನಿಯಮ 29ರ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಕಂಡುಬಂದಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ