ಸೋಮವಾರ, ಮೇ 6, 2024
ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾತದಲ್ಲಿ ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1ಕೋಟಿ ರೂಪಾಯಿ ನೆರವು, ಚೆಕ್ ವಿತರಿಸಿದ ಶ್ರೀರಾಮುಲು

Twitter
Facebook
LinkedIn
WhatsApp
f 13

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ. ಅಲ್ಲಿಗೆ ಮಾತಿಗೆ ತಕ್ಕಂತೆ ಚಿತ್ರದುರ್ಗ ಕೆಎಸ್​​ಆರ್​ಟಿಸಿ ನಿಗಮ ನಡೆದುಕೊಂಡಿದೆ.

ಚಿತ್ರದುರ್ಗ ಡಿಪೋಗೆ ಸೇರಿದ್ದ ಚಾಲಕ ಕಮ್​ ನಿರ್ವಾಹಕ ಉಮೇಶ್ ಅಪಘಾತದಲ್ಲಿ ನಿಧನರಾಗಿದ್ದರು. ಬಸ್ ಚಾಲನೆ ಮಾಡುವ ವೇಳೆ ನಡೆದ ಅಪಘಾತ ಜೀವ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇನ್ಶ್ಯೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂಪಾಯಿ ಚೆಕ್ ಅನ್ನು ಸಚಿವರು ಮೃತ ಉಮೇಶ್​ ಕುಟುಂಬಕ್ಕೆ ವಿತರಣೆ ಮಾಡಿದ್ದಾರೆ. ಇಂದು ಶಾಂತಿನಗರ KSRTC ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​, ಮತ್ತು ಎಸ್​​ಬಿಐ ಬ್ಯಾಂಕ್​ನಿಂದ ನೆರವುವನ್ನು ಉಮೇಶ್​​ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ