ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Twitter
Facebook
LinkedIn
WhatsApp
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಆನೇಕಲ್: ಅಪ್ರಾಪ್ತೆ (Minor) ಮೇಲೆ ಅತ್ಯಾಚಾರವೆಸಗಿದ್ದ (Rape) 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ 10 ವರ್ಷಗಳ‌ ಕಠಿಣ ಸಜೆ, ‌10 ‌ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. 2017‌ರಲ್ಲಿ 14 ವರ್ಷದ ಬಾಲಕಿ ಕುರಿಕಾಯಲು ತೆರಳಿದ್ದರು. ಈ ವೇಳೆ ಆರೋಪಿ ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ಅಂತ ಆನೇಕಲ್‌ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಜಿಗಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯೊಂದರಲ್ಲಿ ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಗರದ ಮನೆಯೊಂದರಲ್ಲಿ ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ, ಕೊಟ್ಟೂರು ತಾಲೂಕಿನ ಹೊಸಕೊಡಿಹಳ್ಳಿ ಗ್ರಾಮ ಮೂಲದ‌ ಆಲಿಯಾ ಅಂಜುಮ್ ನಾಡ‌ (22) ಮೃತ ದುರ್ದೈವಿ. ಆಲಿಯಾ ಅವರನ್ನು ಕೆಲ‌ ದಿನಗಳ ಹಿಂದಷ್ಟೇ ಸರ್ಜಾಪುರ ತಾಲೂಕು ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆ ಮುಂಭಾಗದಲ್ಲಿ ಇರುವ ಶ್ರೀನಿವಾಸ ಬಿಲ್ಡಿಂಗ್​ನಲ್ಲಿ ಅಣ್ಣ ತಂಗಿ ವಾಸವಾಗಿದ್ದರು. ಇಂದು (ಮಾ.26) ಆಲಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ (NH-50) ಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್​ ಚಡಚಣದಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ