ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಮುಖ್ಯೋಪಾಧ್ಯಾಯನ ಬಂಧನ

Twitter
Facebook
LinkedIn
WhatsApp
All about coconut tree 30

ರಾಯಚೂರು: 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು (Headmaster) ಪೊಲೀಸರು ವಶಕ್ಕೆ ಪಡೆದ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.

ಶಾಲೆಯ ಮುಖ್ಯೋಪಾಧ್ಯಾಯ ವಿ.ಕೆ.ಅಂಗಡಿ ಈ ಪ್ರಕರಣದ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ವಿದ್ಯಾರ್ಥಿನಿ ಮೊಬೈಲ್ ಕಾಲ್ ರೆಕಾರ್ಡ್ ಹಾಗೂ ವಾಟ್ಸಾಪ್ ಮೆಸೇಜ್‌ಗಳಿಂದ ಕಾಮುಕ ಮುಖ್ಯೋಪಾಧ್ಯಾಯನ ಬಣ್ಣ ಬಯಲಾಗಿದೆ. 

ಹೇಳಿದ ಹಾಗೆ ಕೇಳದಿದ್ದರೆ ಪರೀಕ್ಷೆ ಆದ ಮೇಲೆ ಏನಾಗುತ್ತದೆ ನೋಡು ಎಂದು ಮುಖ್ಯೋಪಾಧ್ಯಾಯ ಬೆದರಿಕೆ ಹಾಕಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ (Offer) ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಾನವ ಹಕ್ಕುಗಳು (Human Rights) ಮತ್ತು ಭ್ರಷ್ಟಾಚಾರ ವಿರೋಧಿ ವೇದಿಕೆಗೂ (Anti-Corruption Forum) ದೂರು ಸಲ್ಲಿಸಿದ್ದಾಳೆ. 

ದೂರು ಹಿನ್ನೆಲೆ ಮುಖ್ಯೋಪಾಧ್ಯಾಯನನ್ನು ಪೊಲೀಸರು ವಶಕ್ಕೆ ಪಡೆಯಲು ಬಂದಿದ್ದಾರೆ. ಇದೇ ವೇಳೆ ಪೋಷಕರು ಹಾಗೂ ಸಾರ್ವಜನಿಕರು ಥಳಿಸಲು ಮುಂದಾದರು. ಆಕ್ರೋಶಗೊಂಡಿದ್ದ ಪೋಷಕರು ಆರೋಪಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಮುಖ್ಯೋಪಾಧ್ಯಾಯನಿಗೆ ಕಪಾಳಮೋಕ್ಷ ಮಾಡಿದರು. ಆರೋಪಿ ವಿ.ಕೆ.ಅಂಗಡಿಯನ್ನು ವಶಕ್ಕೆ ಪಡೆದಿರುವ ಮಹಿಳಾ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ