ತುಮಕೂರಿನಲ್ಲಿ ಮಾತನಾಡಿದ ಅವರು ನಾನು ಬ್ಯಾಲೆಟ್ ಪೇಪರ್ ತೋರಿಸುವಾಗ ಸರಿಯಾಗಿಯೇ ತೋರಿಸಿದ್ದೇನೆ. 3-4 ನಿಮಿಷ ಹಿಡಿದುಕೊಂಡಿದ್ದೇನೆ. ಅದಾದ ಮೇಲೆ ಹೋಗಿ ವೋಟ್ ಹಾಕಿದ್ದೇನೆ. ಅವನೇನು ಕತ್ತೆ ಕಾಯುತ್ತಿದ್ದನಾ…? ಹೆಬ್ಬೆಟ್ಟು ತೆಗಿ ಅನ್ನಬೇಕಿತ್ತು. ನನಗಿರುವ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮನೆಯವರೇ ನಾಟಕ ಮಾಡ್ತಿದ್ದಾರೆ. ನನ್ನನ್ನು ಮುಗಿಸಬೇಕು ಅಂತಾ ಹೇಳಿ ಅವರೇ ತಮಗೆ ಬೇಕಾದವರಿಂದ ಕ್ರಾಸ್ ವೋಟಿಂಗ್ ಮಾಡಿಸಿದ್ದಾರೆ. ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ನನಗೂ, ಅವರಿಗೂ ಆಗೊಲ್ಲ ಅನ್ನೋದು ಗೊತ್ತು. ಈಗಾಗಲೇ ನನ್ನನ್ನು ಸೋಲಿಸಲೇ ಬೇಕು ಅಂತಾ ಷಡ್ಯಂತ್ರ ಮಾಡಿದ್ದಾರೆ. ಇದು ಕೂಡ ಅದೇರೀತಿ ಷಡ್ಯಂತರ. ಇದೇ ಕುಮಾರಸ್ವಾಮಿ ಕ್ರಾಸ್ ವೋಟಿಂಗ್ ಮಾಡ್ಸಿ ನನ್ನ ಮೇಲೆ ಹಾಕುತ್ತಿದ್ದಾರೆ. ಅವರಿಗೆ ಗೊತ್ತಿತ್ತು ತಮ್ಮ ಅಭ್ಯರ್ಥಿ ಗೆಲ್ಲಲ್ಲ ಅಂತಾ, ಹೀಗಾಗಿ, ನನ್ನ ಮೇಲೆ ಗೂಬೆ ಕೂರಿಸಿ ತೇಜೋವಧೆ ಮಾಡುವ ಪ್ರಯತ್ನ ಮಾಡಿದ್ದಾರೆ.
ನಾನು ಇವನಿಗೆ ಹೆದರಿಕೊಂಡು ಅಥವಾ ಬೇರೆ ಯಾರಿಗೋ ಹೆದರಿಕೊಂಡು ಯಾರಿಗೂ ಕಚ್ಚೆ ಕಟ್ಟಲ್ಲ. ನನ್ನ ಮನಃಸಾಕ್ಷಿ ವಿರುದ್ಧ ನಾನು ನಡೆಯಲ್ಲ. ನಾಚಿಕೆ ಇಲ್ಲ, ಮಾನ, ಮರ್ಯಾದೆ ಇಲ್ಲ. ಗಳಿಗೆಗೊಂದು, ಗಂಟೆಗೊಂದು ಹೇಳಿಕೊಂಡು ತಿರುಗುತ್ತಾನೆ. ಇವನನ್ನ ಯಾರಾದ್ರೂ ಲೀಡರ್ ಅಂತಾ ಹೇಳ್ತಾರಾ..? ನಾನು ಬಿಜೆಪಿಯನ್ನು ಪ್ರಾರಂಭದಿಂದಲೂ ವಿರೋಧ ಮಾಡಿಕೊಂಡು ಬಂದಿದ್ದೇನೆ. ಆಪರೇಷನ್ ಕಮಲ ನಿಲ್ಲಿಸಿದ್ದೆ ನಾನು. ಹಾಕಿದ್ರೆ ನಾನು ಕಾಂಗ್ರೆಸ್ ಗೆ ಹಾಕಿರುತ್ತೇನೆ. ನಾನೇನು ಇವನಿಗೆ ಹೆದರಿಕೊಳ್ಳಬೇಕಾ…? ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕಿದ್ದ ಮೇಲೆ ಹೆದರಿಕೊಳ್ಳುವುದು ಹೇಗೆ ಬಂತು. ಕುಮಾರಸ್ವಾಮಿ ನಾನು ಹೆಬ್ಬೆಟ್ಟು ಇಟ್ಟುಕೊಂಡಿರೋದನ್ನ ನೋಡಿದ್ನಾ…? ಎಲ್ಲವನ್ನೂ ಕಲ್ಪನೆ ಮಾಡಿಕೊಂಡು ಹೇಳ್ತಾನೆ.
ಒಬ್ಬನನ್ನ ತೇಜೋವಧೆ ಮಾಡಬೇಕು ಅಂದ್ರೆ ಏನೂ ಬೇಕಾದ್ರೂ ಮಾಡ್ತಾರೆ. ಇವನು ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಆದವನು. ಯೋಗ್ಯತೆಯಿಂದ ಮುಖ್ಯಮಂತ್ರಿ ಆದವನಲ್ಲ. ಇನ್ನೊಂದು ಜನ್ಮ ಎತ್ತಿಬಂದರೂ ಇವನ ಪಕ್ಷಕ್ಕೆ ಬಹುಮತ ಬರಲ್ಲ. ಒಕ್ಕಲಿಗರನ್ನ ತುಳಿಯೋದೇ ಇವನ ಒನ್ ಪಾಯಿಂಟ್ ಅಜೆಂಡಾ. ಒಳ್ಳೆಯ ಕಾರು, ಒಳ್ಳೆಯ ಬಟ್ಟೆ ಹಾಕಿಕೊಂಡು ಹೋದ್ರೆ, ಅವರ ಕೆಂಗಣ್ಣಿಗೆ ಗುರಿಯಾಗಿ ಹೋಗ್ತೇವೆ. ಪಕೀರರು, ಪೇಪರ್ ಆಯೋರು ಇರ್ತಾರಲ್ಲ ಆ ತರಾ ಇರಬೇಕು. ಇನ್ನು ಮುಂದೆ ನೋಡಲಿ, ಎಲ್ಲವನ್ನೂ ಬಿಚ್ಚಿಡುತ್ತೇವೆ. ಏನು ನೈತಿಕತೆ ಇದೆ. ಇನ್ನೊಬ್ಬರ ಬಗ್ಗೆ ಮಾತನಾಡೋಕೆ. ಇವರದು ಏನು ಇದೆ ಅದನ್ನ ನೋಡಿಕೊಳ್ಳಬೇಕು. ಇವನ ವಿರುದ್ಧ ಹೋರಾಟ ಮಾಡೋದೆ ನನ್ನ ಮುಂದಿನ ನಡೆ. ನಾನು ಸೋತರೂ ಪರವಾಗಿಲ್ಲ. ಇವನ ಅಭ್ಯರ್ಥಿಯನ್ನು ಗೆಲ್ಲದೋಕೆ ಬಿಡೋಲ್ಲ. ಅವನೇನಾದರೂ ಗೆದ್ದುಬಿಡಲಿ, ನನ್ನ ಲೈಫ್ ಲಾಂಗ್ ಅವರ ಮನೆಯಲ್ಲಿ ಕೂಲಿ ಮಾಡ್ತೇನೆ ಎಂದು ಹೆಚ್.ಡಿ.ಕೆ ವಿರುದ್ದ ಕಿಡಿಕಾರಿದ್ರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?