ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪಾಟ್ನಾ (ಸೆ. 29): ಹೋಮ್ವರ್ಕ್ ಮಾಡಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕನೊಬ್ಬ, ಪುಟ್ಟ ವಿದ್ಯಾರ್ಥಿಗೆ ಭೀಕರವಾಗಿ ಥಳಿಸಿ, ಸಾಯಿಸಿದ ಘಟನೆ ನಡೆದಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಹಾಸ್ಟೆಲ್ನಲ್ಲಿಯೇ ತಂಗಿದ್ದ 6 ವರ್ಷದ ಹುಡುಗ ಮೂರನೇ ತರಗತಿಯಲ್ಲಿ ಓದುತ್ತಿದ್ದ. ಪೊಲೀಸರ ಮಾಹಿತಿಯ ಪ್ರಕಾರ, ಬುಧವಾರ ಶಾಲೆಯ ಘೇಟ್ನ ಹೊರಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು ಪತ್ತೆಯಾಗಿತ್ತು ಎಂದು ಹೇಳಿದ್ದಾರೆ. ಪೊಲೀಸರು ಮಗುವನ್ನು ನೋಡಿದ ವೇಳೆ, ಆತನ ಮುಖ ಸಂಪೂರ್ಣವಾಗಿ ಊದಿಕೊಂಡಿತ್ತು. ಆತನ ಮೂಗಿನಿಂದ ರಕ್ತ ಸುರಿಯುತ್ತಿತ್ತು. ಅಲ್ಲದೆ, ಶಾಲೆಯ ಸಮವಸ್ತ್ರ ಕೂಡ ಸಂಪೂರ್ಣವಾಗಿ ಹರಿದುಹೋಗಿತ್ತು. ತಕ್ಷಣವೇ ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯದಲ್ಲಿಯೇ ಹುಡುಗ ಸಾವು ಕಂಡಿದ್ದಾರೆ. 6 ವರ್ಷದ ಹುಡುಗ, ವಜೀರ್ಗಂಜ್-ಫತೇಪುರ್ ರಸ್ತೆಯಲ್ಲಿರುವ ಬಧಿ ಬಿಘಾ ಗ್ರಾಮದ ಬಳಿ ಇರುವ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್ನಲ್ಲಿ ಓದುತ್ತಿದ್ದ. ಹುಡುಗನ ಮನೆ ಶಾಲೆಯಿಂದ ಮೂರು ಕಿಲೋಮೀಟರ್ ದೂರದಲ್ಲಿದ್ದ ಕಾರಣಕ್ಕೆ ಹುಡುಗನನ್ನು ಶಾಲೆಯ ಹಾಸ್ಟೆಲ್ನಲ್ಲಿಯೇ ಇರಿಸಿದ್ದರು. ಮಗು ಸಾವು ಕಂಡಿದ್ದು ತಿಳಿದ ಕೂಡಲೇ, ಹುಡುಗನ ಕುಟುಂಬದವರು ಶಾಲೆಯ ಎದುರು ಪ್ರತಿಭಟನೆಗೆ ಇಳಿದಿದ್ದಾರೆ.
ಪ್ರತಿಭಟನೆ ತೀವ್ರವಾದ ಬಳಿಕ ಪೊಲೀಸರು ಶಾಲಾ ನಿರ್ದೇಶಕ ವಿಕಾಸ್ ಸಿಂಗ್ ಅವರನ್ನು ಬುಧವಾರ ಸಂಜೆ ಬಂಧಿಸಿದ್ದಾರೆ. 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮಗುವಿನ ಸಾವಿನ ನಂತರ ಶಾಲೆಯನ್ನೂ ಮುಚ್ಚಲಾಗಿದೆ. ಹಾಸ್ಟೆಲ್ನಲ್ಲಿರುವ ಎಲ್ಲಾ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.
ನನ್ನ ಮೊಮ್ಮಗನನ್ನು ಶಾಲೆ ಹಾಗೂ ಆಡಳಿತ ಮಂಡಳಿಯೇ ಕೊಲೆ ಮಾಡಿದೆ ಎಂದು ಮಗುವಿನ ಅಜ್ಜ ರಾಮಬಾಲಕ್ ಪ್ರಸಾದ್ ಆರೋಪಿಸಿದ್ದಾರೆ. ಹಲ್ಲೆಯ ಬಗ್ಗೆ ಈ ಹಿಂದೆಯೂ ದೂರು ನೀಡಲಾಗಿತ್ತು, ಆದರೆ ಈಗ ಹಾಗಾಗುವುದಿಲ್ಲ ಎಂದು ಶಾಲೆಯವರು ಹೇಳಿದ್ದರು. ಅದರ ನಂತರ ಎಲ್ಲವೂ ಸರಿಯಾಗಿತ್ತು. ಅಜ್ಜ, ತನ್ನ ಮೊಮ್ಮಗ ವಿವೇಕ್ ಕುಮಾರ್ನನ್ನು ಶಿಕ್ಷಕ ವಿಕಾಸ್ ಕುಮಾರ್ ಸಿಂಗ್ ಹೊಡೆದು ಶಾಲೆಯಿಂದ ಹೊರಹಾಕಿದ್ದ. ನಂತರ ಅವನು ಶಾಲೆಯ ಹೊರಗೆ ಸ್ವಲ್ಪ ದೂರದಲ್ಲಿ ಗಂಟೆಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದ ಎಂದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?