ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟವಾಡಿ ಬಂದು ಮಲಗಿದ್ದ ಬಾಲಕಿ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp
whatsapp 3170dc38e8bf44a2 7

ಹೈದರಾಬಾದ್: ಇತ್ತೀಚಿಗೆ ಹೋದಲ್ಲಿ ಬಂದಲ್ಲಿ ಹೃದಯಘಾತವಾಗಿ ಜನರು ಕುಸಿದುಬಿದ್ದು ಸಾವನ್ನಪ್ಪೋದು ಸಾಮಾನ್ಯವಾಗಿದೆ. ಮಕ್ಕಳು, ಹಿರಿಯರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ ಅಟ್ಯಾಕ್‌ಗೆ ಬಲಿಯಾಗುತ್ತಿದ್ದಾರೆ. ಮಹಬೂಬಾಬಾದ್‌ನ ಮಾರಿಪೇಡಾ ಮಂಡಲದ ಅಬ್ಬೈಪಾಲೆಂ ಗ್ರಾಮದಲ್ಲಿ ನಿನ್ನೆ ಮುಂಜಾನೆ 13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 6ನೇ ತರಗತಿಯ ವಿದ್ಯಾರ್ಥಿನಿ  ಶ್ರವಂತಿ ಗುರುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಮನೆ ಮಂದಿ ಇದನ್ನು ನೋಡಿ ವೈದ್ಯರ ಬಳಿಗೆ ಕರೆದೊಯ್ಯುವ ಮುನ್ನವೇ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಆಟ ಆಡಿ ಬಂದು ಮಲಗಿದ್ದ ಬಾಲಕಿಗೆ ಹೃದಯಾಘಾತ
ಗುರುವಾರ ರಾತ್ರಿ ಮಲಗಿದ ಕೆಲವು ಗಂಟೆಗಳ ನಂತರ, 12.30 ರ ಸುಮಾರಿಗೆ ಬಾಲಕಿಗೆ (Girl)ಎಚ್ಚರವಾಯಿತು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಅವಳು ತನ್ನ ಎದೆಯಲ್ಲಿ ನೋವು (Chest pain) ಅನುಭವಿಸುತ್ತಿರುವುದನ್ನು ತನ್ನ ಅಜ್ಜಿಗೆ ತಿಳಿಸಿದಳು. ಕುಟುಂಬದ ಸದಸ್ಯರು ಅವಳನ್ನು ವೈದ್ಯರ ಬಳಿಗೆ ಕರೆದೊಯ್ಯಲು ಆಟೋವನ್ನು ಕರೆತರುವ ಹೊತ್ತಿಗೆ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಾಲಕಿ ಸಾವನ್ನಪ್ಪಿದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗಿಯ ಚಿಕ್ಕಪ್ಪ ಅವಳಿಗೆ ಸಿಪಿಆರ್ ನೀಡಲು ಪ್ರಯತ್ನಿಸಿದರೂ ಯಶಸ್ವಿಯಾಗಲ್ಲಿಲ್ಲ.

ಗುರುವಾರ ಶ್ರೀರಾಮ ನವಮಿ ನಿಮಿತ್ತ ಶಾಲೆಗಳಿಗೆ ರಜೆ ಇದ್ದ ಕಾರಣ ಬಾಲಕಿ ತನ್ನ ಸ್ನೇಹಿತರೊಂದಿಗೆ ಆಟವಾಡಿ ಅಜ್ಜಿಯ ಮನೆಯಲ್ಲಿ ಮಲಗಿದ್ದಳು. ಆಕೆ ಮಾರಿಪೇಡಾದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಳು. ಬಾಲಕಿಯ ಪೋಷಕರು (Parents) ಕೃಷಿಕರಾಗಿದ್ದ, ಈಕೆ ಎರಡನೇ ಮಗಳು. ಇನ್ನೂ ಬಾಳಿ ಬದುಕಬೇಕಿದ್ದ ಮಗಳ ಸಾವಿನಿಂದ ಕುಟುಂಬದಲ್ಲಿ (Family) ಶೋಕ ಆವರಿಸಿದೆ. ತೆಲಂಗಾಣದಲ್ಲಿ ಕಳೆದ 1-2 ತಿಂಗಳಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಹಠಾತ್ ಹೃದಯಾಘಾತಕ್ಕೆ (Heartattack) ಬಲಿಯಾಗುತ್ತಿರುವುದು ಆತಂಕ ಮೂಡಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ