ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆತ್ಮಗಳೊಂದಿಗೆ ಮಾತನಾಡುತ್ತೇನೆ ಎಂದು ಹೇಳುತ್ತಿದ್ದಳು. ಈಗ ಮನೆಬಿಟ್ಟು ಹೊರಟು ಹೋಗಿದ್ದಾಳೆ!

Twitter
Facebook
LinkedIn
WhatsApp
ಆತ್ಮಗಳೊಂದಿಗೆ ಮಾತನಾಡುತ್ತೇನೆ ಎಂದು ಹೇಳುತ್ತಿದ್ದಳು. ಈಗ ಮನೆಬಿಟ್ಟು ಹೊರಟು ಹೋಗಿದ್ದಾಳೆ!

ಬೆಂಗಳೂರು : ಓದಿ ಉತ್ತಮ ಶಿಕ್ಷಣ ಪಡೆದು ಸ್ವಾವಲಂಬಿಯಾಗಬೇಕಿದ್ದ ಬಾಲಕಿಯೊಬ್ಬಳು ಇಂಟರನೆಟ್ ಪ್ರಭಾವದಿಂದ ಶಾಮನಿಸಮ್ ಮೋಡಿಗೆ ಒಳಗಾಗಿ ಮನೆ ಬಿಟ್ಟು ಹೋಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚಿತ್ರವಾಗಿ ವರ್ತಿಸುತ್ತಿದ್ದ ಮಗಳನ್ನು ಮನೆಯಲ್ಲೇ ಉಳಿಸಿಕೊಳ್ಳಲು ಸರ್ಕಸ್ ಮಾಡಿದ್ದ ಪೋಷಕರು ಈಗ ಕಂಗಲಾಗಿದ್ದು ಮಗಳನ್ನು ಹುಡುಕಿ ಕೊಡುವಂತೆ ಈಗ ಪೊಲೀಸರು ಹಾಗೂ ಸೋಷಿಯಲ್ ಮೀಡಿಯಾ ಮೊರೆ ಹೋಗಿದ್ದಾರೆ.

ಶಾಮನಿಸಂ ಅನ್ನೋದು ಪುರಾತನವಾದ ಒಂದು ಹೀಲಿಂಗ್ ಪದ್ಧತಿ. ಈ ಶಾಮನಿಸಂನಲ್ಲಿ ಪರಿಣಿತಿ ಪಡೆದವರು ಅರೆಪ್ರಜ್ಞಾವಸ್ಥೆಯಲ್ಲಿ ಆತ್ಮಗಳ ಜೊತೆ ಮಾತನಾಡುತ್ತಾರೆ ಎಂದು ನಂಬಲಾಗಿದೆ. ಈ‌ ಶಾಮನಿಸಂಗೆ ಪ್ರಭಾವಿತಳಾಗಿದ್ದ 17 ವರ್ಷದ ಯುವತಿ ಸದಾ ಇಂಟರನೆಟ್ ನಲ್ಲಿ ಶಾಮನಿಸಂಗೆ ಸಂಬಂಧಿಸಿದ ಸಂಗತಿಗಳನ್ನೇ ಹುಡುಕಿ ಅಧ್ಯಯನ ಮಾಡುತ್ತಿದ್ದಳು ಎನ್ನಲಾಗಿದೆ.

ಮಗಳು ಅತಿಯಾಗಿ ಇಂಟರನೆಟ್ ನಲ್ಲಿ ಈ ವಿಚಾರವನ್ನೇ ಆಧ್ಯಯನ ಮಾಡುತ್ತಿರುವುದನ್ನು ನೋಡಿದ ಪೋಷಕರು ಆಕೆಗೆ ಬುದ್ಧಿವಾದ ಹೇಳಿದ್ದು ಇದರಿಂದ ಕೋಪಗೊಂಡ ಬಾಲಕಿ ಪೋಷಕರೊಂದಿಗೆ ಮಾತನಾಡುವುದನ್ನೇ ನಿಲ್ಲಿಸಿದ್ದಳಂತೆ. ಮಗಳ ಈ ವರ್ತನೆಯಿಂದ‌ ನೊಂದ ಪೋಷಕರು ಮಗಳಿಗೆ ಕೌನ್ಸಲಿಂಗ್‌ಕೊಡಿಸಿದ್ದರಂತೆ. ಆದರೆ ಇದ್ಯಾವುದಕ್ಕೂ ಬಗ್ಗದ ಯುವತಿ ಶಾಮನಿಸಂ ಹಾಗೂ ದೆವ್ವ ಭೂತದ ವಿಚಾರವನ್ನೇ ಸದಾ ಓದುವುದು, ಇಂಟರನೆಟ್ ಬಳಸಿ ಬ್ರೌಸ್ ಮಾಡುವುದನ್ನು ಮುಂದುವರೆಸಿದ್ದಳು ಎನ್ನಲಾಗಿದೆ.

ಈ ಮಧ್ಯೆ ಅಕ್ಟೋಬರ್ 31 ರಂದು ಬಾಲಕಿ ಎರಡು ಜೊತೆ ಬಟ್ಟೆ,2,500 ರೂ‌ ನಗದಿನೊಂದಿಗೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ತಮ್ಮ ಮಗಳು ಮನೆ ಬಿಟ್ಟು ಹೋಗಿರುವುದಕ್ಕೆ ಶಾಮನಿಸಂ ಕಾರಣ ಎಂಬುದು ಹೆತ್ತವರ ಆರೋಪ. ಆಧ್ಮಾತ್ಮಿಕ ಜೀವನದ ಕುರಿತು ತರಬೇರಿ ನೀಡುವ ಪೋಷಕರೊಂದಿಗೂ ಬಾಲಕಿ ಸದಾ ಶಾಮನಿಸಂ ಕುರಿತೇ ಮಾತನಾಡುತ್ತಿದ್ದಳು ಎನ್ನಲಾಗಿದೆ.
ಸದಾ ಆನ್ ಲೈನ್ ನಲ್ಲಿ ಮಾಟ ಮಂತ್ರದ ವಿಡಿಯೋ‌ನೋಡುತ್ತಿದ್ದ ಬಾಲಕಿ ಹೆತ್ತವರೊಂದಿಗೆ ಮಾತನಾಡುವುದನ್ನು ಹಾಗೂ ಜನರೊಂದಿಗೆ ಬೆರೆಯುವುದನ್ನೆ ನಿಲ್ಲಿಸಿದ್ದಳು ಎನ್ನಲಾಗಿದೆ. ಹೆತ್ತವರ ದೂರು ಆಧರಿಸಿ ಸುಬ್ರಹ್ಮಣ್ಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಈ ಪ್ರಕರಣ ಪೊಲೀಸರ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ನಗರದ ಬಸ್ ನಿಲ್ದಾಣ ಸೇರಿದಂತೆ ಹಲವೆಡೆಯ ಸಿಸಿಟಿವಿಯನ್ನು ಪರಿಶೀಲನೆ ನಡೆಸಿರುವ ಪೊಲೀಸರು ಎರಡು ತಿಂಗಳಿನಿಂದ ಬಾಲಕಿ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು