ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

Twitter
Facebook
LinkedIn
WhatsApp
ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

ಕಾಬೂಲ್‌: ಅಫ್ಘಾನಿಸ್ತಾನದ (Afghanistan) ಮಾಜಿ ಪ್ರಧಾನಿ ಗುಲ್ಬುದ್ದೀನ್ ಹೆಕ್ಮತ್ಯಾರ್ (Gulbuddin Hekmatyar) ಕಟ್ಟಡದ ಮೇಲೆ ದಾಳಿ ನಡೆಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಹೆಕ್ಮತ್ಯಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರದ ಪ್ರಾರ್ಥನೆಗಾಗಿ ಹೆಕ್ಮತ್ಯಾರ್ ಮತ್ತು ಅವರ ಬೆಂಬಲಿಗರು ಹೋಗಿದ್ದ ಮಸೀದಿಯೊಂದಕ್ಕೆ ಪ್ರವೇಶಿಸಲು ಯತ್ನಿಸಿದ ಇಬ್ಬರು ದಾಳಿಕೋರರನ್ನು ಭದ್ರತಾ ಸಿಬ್ಬಂದಿ ಕೊಂದಿದ್ದಾರೆ ಎಂದು ಅಲ್ ಜಜೀರಾ ಹೇಳಿಕೆಯಲ್ಲಿ ತಿಳಿಸಿದೆ. 

ಕಾಬೂಲ್‌ನ ದಾರುಲಾಮನ್ ಪ್ರದೇಶದಲ್ಲಿ ಹಿಜ್ಬ್-ಎ-ಇಸ್ಲಾಮಿ ಪಕ್ಷದ ಹೆಕ್ಮತ್ಯಾರ್ ಕಟ್ಟಡದ ಮೇಲೆ ದಾಳಿ ನಡೆದಿದೆ. ದಾಳಿಕೋರರು ಮಹಿಳಾ ಬುರ್ಕಾಗಳನ್ನು ಧರಿಸಿ ಬಂದ ಆತ್ಮಹತ್ಯಾ ಬಾಂಬರ್‌ಗಳಾಗಿದ್ದರು. ಮಾಜಿ ಪ್ರಧಾನಿಯನ್ನು ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಅಲ್ ಜಜೀರಾ ವರದಿ ಮಾಡಿದೆ.

“ನನ್ನ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ. ನನಗೆ ಏನೂ ಆಗಿಲ್ಲ. ಅವರು ವಿಫಲ ಪ್ರಯತ್ನ ಮಾಡಿದ್ದಾರೆ” ಎಂದು ಹೆಕ್ಮತ್ಯಾರ್ ತಮ್ಮ ಹತ್ಯೆ ಸಂಚು ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಬೂಲ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಶ್ರಫ್‌ ಘನಿ ಮತ್ತು ಇತರ ಮಾಜಿ ನಾಯಕರು ಪಲಾಯನವಾಗಿದ್ದರು. ಆದರೆ ಹೆಕ್ಮತ್ಯಾರ್ ಮಾತ್ರ ಕಾಬೂಲ್‌ನಲ್ಲಿಯೇ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ