ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಉತ್ತರಪ್ರದೇಶ: ಮಲತಾಯಿಯೊಬ್ಬಳು ಆರು ವರ್ಷದ ದತ್ತು ಪುತ್ರಿಯ ಮೇಲೆ ಬಿಸಿ ಎಣ್ಣೆ ಸುರಿದ ಭಯಾನಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರು ವರ್ಷದ ಹಿಂದೆ ದಂಪತಿ ಮದುವೆಯಾಗಿದ್ದು ಮಕ್ಕಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಪತಿ ಅಜಯ್ಕುಮಾರ್ ಆರು ತಿಂಗಳ ಹಿಂದಷ್ಟೇ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದರು. ಆದರೆ ಇದಕ್ಕೆ ಅಜಯ್ ಕುಮಾರ್ ಪತ್ನಿಯ ಸಮ್ಮತಿ ಇರಲಿಲ್ಲ. ಹೀಗಾಗಿ ಆಕೆ ದಿನವೂ ಪುಟ್ಟ ಬಾಲಕಿಯೊಂದಿಗೆ ಹಗೆ ಸಾಧಿಸುತ್ತಿದ್ದಳು. ಈ ನಡುವೆ ಜುಲೈ 13ರಂದು ಕೂಡ ಪುಟ್ಟ ಬಾಲಕಿಯೊಂದಿಗೆ ಜಗಳ ತೆಗೆದ ಆಕೆ ಮಗುವಿನ ಖಾಸಗಿ ಭಾಗಕ್ಕೆ ಬಿಸಿಎಣ್ಣೆ ಎರಚಿದ್ದಾಳೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 35 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಹಾಗೂ ಮಗುವಿನ ದತ್ತು ತಂದೆ ಅಜಯ್ಕುಮಾರ್ ಪೊಲೀಸರಿಗೆ ದೂರು ನೀಡಿದ್ದರು. ಬಂಧಿತ ಮಹಿಳೆಯನ್ನು ಪೂನಂ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ತಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಜಯ್ಕುಮಾರ್ ಆಹಾರದ ಗಾಡಿಯೊಂದನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಠಾಕೂರ್ ಗಂಜ್ನ ಸ್ಟೇಷನ್ ಹೌಸ್ ಆಫೀಸರ್, ಹರಿ ಶಂಕರ್ ಚಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪೂನಂ ಹಾಗೂ ಅಜಯ್ಕುಮಾರ್ ದಂಪತಿ ಮದುವೆಯಾಗಿ ಹಲವು ವರ್ಷಗಳಾಗಿದ್ದು, ಅವರಿಗೆ ಅವರದೇ ಆದ ಮಕ್ಕಳಿರಲಿಲ್ಲ. ಹೀಗಾಗಿ ಆರು ತಿಂಗಳ ಹಿಂದೆ ಇವರು ಮಗುವೊಂದನ್ನು ದತ್ತು ಪಡೆದಿದ್ದರು. ಆದರೆ ಪತ್ನಿ ಪೂನಂಗೆ ಇದು ಇಷ್ಟವಿರಲಿಲ್ಲ. ಹೀಗಾಗಿ ಮಗುವಿನ ಮೇಲೆ ಆಗಾಗ ತನ್ನ ದರ್ಪ ತೋರುತ್ತಿದ್ದ ಆಕೆ ಈ ಬಾರಿ ಮಗುವಿನ ಖಾಸಗಿ ಭಾಗದ ಮೇಲೆ ಬಿಸಿ ಎಣ್ಣೆ ಎರಚಿದ್ದಾಳೆ ಎಂದು ತಿಳಿಸಿದರು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?