ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ 109 ರನ್​ಗಳಿಗೆ ಆಲೌಟ್ ಆದ ಭಾರತ

Twitter
Facebook
LinkedIn
WhatsApp
ind vs aus 3rd test 1

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಟೀಂ ಇಂಡಿಯಾ ನಾಯಕನ ನಿರ್ಧಾರ ತಪ್ಪು ಎಂದು ಸಾಭೀತುಪಡಿಸಿದ ಆಸೀಸ್ ಬೌಲಿಂಗ್ ವಿಭಾಗ ರೋಹಿತ್ ಬಳಗವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಟೀಂ ಇಂಡಿಯಾ ಪರ ಉರುಳಿದ ಅಷ್ಟೂ ವಿಕೆಟ್​ಗಳನ್ನು ಆಸೀಸ್​ನ ಸ್ಪಿನ್​ ವಿಭಾಗ ಕಬಳಿಸಿದ್ದಯ ವಿಶೇಷವಾಗಿತ್ತು. ಆಸೀಸ್ ಪರ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರೆ, ನಾಥನ್ ಲಿಯಾನ್ 3 ವಿಕೆಟ್ ಹಾಗೂ ಟಾಡ್ ಮರ್ಫಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ನೀಡಲು ಮುಂದಾದರು. ಆದರೆ 27 ರನ್​ಗಳಿಸುವುದರೊಳಗೆ ಈ ಜೋಡಿ ಬೇರ್ಪಟಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ನಾಯಕ ರೋಹಿತ್ ಸ್ಟಂಪ್ ಔಟ್ ಆದರು. ಬಳಿಕ ರನ್ ಖಾತೆಗೆ 7 ರನ್ ಸೇರಿಸುವುದರೊಳಗೆ ಮತ್ತೊಬ್ಬ ಆರಂಭಿಕ ಗಿಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಚೇತೇಶ್ವರ್ ಪೂಜಾರ ಕೂಡ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

 
50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್

ಇನ್ನು ಬ್ಯಾಟಿಂಗ್​ನಲ್ಲಿ ಮುಂಬಡ್ತಿ ಪಡೆದು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ರವೀಂದ್ರ ಜಡೇಜಾ ಕೂಡ ಒಂದು ಬೌಂಡರಿ ಬಾರಿಸಿದ ಬಳಿಕ ಬ್ಯಾಟ್ ಎತ್ತಿಟ್ಟರು. ಹೀಗಾಗಿ ಟೀಂ ಇಂಡಿಯಾ 50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. ಜಡೇಜಾ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಖಾತೆ ತೆರೆಯದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಉರುಳುತ್ತಿದ್ದರು ಕೊಂಚ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ ತಂಡದ ಪರ ಅತ್ಯಧಿಕ ರನ್ ಅಂದರೆ 22 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಕೆಎಸ್​ ಭರತ್ 17 ರನ್​ಗಳಿಗೆ ಸುಸ್ತಾದರೆ, ಅಶ್ವಿನ್ 3 ರನ್ ಬಾರಿಸಿದರು. ಅಂತಿಮವಾಗಿ 2 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿ, ಸ್ಫೋಟಕ ಆಟಕ್ಕೆ ಮುಂದಾಗಿದ್ದ ಉಮೇಶ್ ಯಾದವ್ ಕೂಡ 17 ರನ್​ಗೆ ಎಲ್​ಬಿ ಬಲೆಗೆ ಬಿದ್ದರು. ಅಂತಿಮವಾಗಿ ರನ್​ಔಟ್ ಆಗುವ ಮೂಲಕ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ