ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

Twitter
Facebook
LinkedIn
WhatsApp
ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

ಕೆಲ ಸ್ಟಾರ್​​ಗಳು ದೊಡ್ಡ ಪರದೆ ಮೇಲೆ ಮಾತ್ರ ಹೀರೋ ಎನಿಸಿಕೊಳ್ಳೋದಿಲ್ಲ. ಅವರು ನಿಜ ಜೀವನದಲ್ಲೂ ಹಿರೋ ಆಗಿ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಕೆಲಸ ಮಾಡಿ ಎಲ್ಲರಿಂದ ಭೇಷ್ ಎನಿಸಿಕೊಳ್ಳುತ್ತಾರೆ. ಮೆಗಾ ಪವರ್​ಸ್ಟಾರ್ ರಾಮ್ ಚರಣ್ (Ram Charan) ಕೂಡ ಈಗ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಕ್ಯಾನ್ಸರ್​ನಿಂದ  ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಅಭಿಮಾನಿಯನ್ನು ರಾಮ್ ಚರಣ್ ಭೇಟಿ ಮಾಡಿ ಆತನ ಕೊನೆಯ ಆಸೆಯನ್ನು ಈಡೇರಿಸಿದ್ದಾರೆ.

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ.

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ.

‘ಆರ್​ಆರ್​ಆರ್​’ ಗೆಲುವಿನ ನಂತರ ರಾಮ್ ಚರಣ್ ಅವರು ‘ಆರ್​ಸಿ15’ ಹಾಗೂ ‘ಆರ್​ಸಿ16’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಮ್ ಚರಣ್ 15ನೇ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 27 ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ಈ ಚಿತ್ರಗಳ ಪೋಸ್ಟರ್ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಚಿತ್ರದ ಶೀರ್ಷಿಕೆ ಅನಾವರಣಗೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇದಲ್ಲದೆ, ಸಲ್ಮಾನ್ ಖಾನ್ ಅಭಿನಯದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ರಾಮ್ ಚರಣ್ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist