ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

Twitter
Facebook
LinkedIn
WhatsApp
ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

ಕೆಲ ಸ್ಟಾರ್​​ಗಳು ದೊಡ್ಡ ಪರದೆ ಮೇಲೆ ಮಾತ್ರ ಹೀರೋ ಎನಿಸಿಕೊಳ್ಳೋದಿಲ್ಲ. ಅವರು ನಿಜ ಜೀವನದಲ್ಲೂ ಹಿರೋ ಆಗಿ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಕೆಲಸ ಮಾಡಿ ಎಲ್ಲರಿಂದ ಭೇಷ್ ಎನಿಸಿಕೊಳ್ಳುತ್ತಾರೆ. ಮೆಗಾ ಪವರ್​ಸ್ಟಾರ್ ರಾಮ್ ಚರಣ್ (Ram Charan) ಕೂಡ ಈಗ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಕ್ಯಾನ್ಸರ್​ನಿಂದ  ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಅಭಿಮಾನಿಯನ್ನು ರಾಮ್ ಚರಣ್ ಭೇಟಿ ಮಾಡಿ ಆತನ ಕೊನೆಯ ಆಸೆಯನ್ನು ಈಡೇರಿಸಿದ್ದಾರೆ.

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ.

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ.

‘ಆರ್​ಆರ್​ಆರ್​’ ಗೆಲುವಿನ ನಂತರ ರಾಮ್ ಚರಣ್ ಅವರು ‘ಆರ್​ಸಿ15’ ಹಾಗೂ ‘ಆರ್​ಸಿ16’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಮ್ ಚರಣ್ 15ನೇ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 27 ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ಈ ಚಿತ್ರಗಳ ಪೋಸ್ಟರ್ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಚಿತ್ರದ ಶೀರ್ಷಿಕೆ ಅನಾವರಣಗೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇದಲ್ಲದೆ, ಸಲ್ಮಾನ್ ಖಾನ್ ಅಭಿನಯದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ರಾಮ್ ಚರಣ್ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ