ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಕರ್ ಅರ್ಹತೆ ಸುತ್ತಿನಲ್ಲಿ ಕಾಣಿಸಿಕೊಂಡ ‘ಕಾಂತಾರ’ ಸಿನಿಮಾ

Twitter
Facebook
LinkedIn
WhatsApp
kantara 002

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ.

ಈ ಕುರಿತು ನಿರ್ದೇಶಕ ರಿಷಬ್ ಶೆಟ್ಟಿ ಟ್ವಿಟ್ ಮಾಡಿದ್ದು, ‘ಕಾಂತಾರ ಸಿನಿಮಾ ಆಸ್ಕರ್ ಅರ್ಹತೆಯ ಸುತ್ತಿನಲ್ಲಿ ಎರಡು ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ. ಈ ವಿಚಾರ ತಿಳಿಸಲು ಸಂತಸವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಲ್ಲದೇ, ಮುಂದಿನ ಹಂತಕ್ಕೆ ಹೋಗಿದ್ದು ಸಂಭ್ರಮ ತಂದಿದೆ’ ಎಂದು ಅವರು ಬರೆದುಕೊಂಡಿದ್ದಾರೆ. 

ಇತ್ತೀಚೆಗಷ್ಟೇ ಸಿನಿಮಾ ಶತದಿನೋತ್ಸವ ಪೂರೈಸಿದೆ. ಸದ್ಯದಲ್ಲೇ ಅದು ಟಿವಿಯಲ್ಲೂ ಪ್ರಸಾರವಾಗಲಿದೆ. ಇಷ್ಟೊಂದು ಸಂಭ್ರಮಗಳೊಂದಿಗೆ ಚಿತ್ರತಂಡ ಕಾಂತಾರ 2 ಸಿನಿಮಾದ ಸಿದ್ಧತೆಯನ್ನು ಸದ್ದಿಲ್ಲದೇ ಮಾಡುತ್ತಿದೆ. ಈಗಾಗಲೇ ಚಿತ್ರಕಥೆಯನ್ನು ಬರೆಯುವುದರಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನುವ ಮಾಹಿತಿ ಇದೆ. ಆದರೆ, ಈ ವಿಷಯವನ್ನು ಸಿನಿಮಾ ಟೀಮ್ ಬಹಿರಂಗ ಪಡಿಸುತ್ತಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ