ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸ್ತಿಗಾಗಿ ದೊಣ್ಣೆಯಿಂದ ಹೊಡೆದು ಸ್ವಂತ ಅಕ್ಕನನ್ನೇ ಕೊಂದ ತಮ್ಮ, ಮೂವರ ಬಂಧನ

Twitter
Facebook
LinkedIn
WhatsApp
davanagere sister murder

ದಾವಣಗೆರೆ: ಜಗತ್ತಿನಲ್ಲಿ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮಾನವೀಯತೆ ಎಂಬುವುದೇ ಮರೆಯಾಗಿದೆ. ರಕ್ತ ಸಂಬಂಧಿಗಳು, ಒಡ ಹುಟ್ಟಿದವರೇ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಹಣ, ಆಸ್ತಿ, ಒಡವೆ, ಪ್ರೀತಿ, ಸ್ನೇಹ, ದ್ವೇಷ, ಸಣ್ಣ ಪುಟ್ಟ ಕಿರಿಕ್​ಗಳಿಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಲಾಗುತ್ತಿದೆ(Murder). ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಮಗ ತಂದೆಯನ್ನೇ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈಗ ಆಸ್ತಿಗಾಗಿ ಅಕ್ಕನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. 

ದಾವಣಗೆರೆ ಜಿಲ್ಲೆಯ ‌ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಜಗಳ ನಡೆದಿದೆ. ಈ ವೇಳೆ ಪ್ರಭಾಕರ ತನ್ನ ಮಕ್ಕಳ ಜೊತೆ ಸೇರಿಕೊಂಡು ತನ್ನ 64 ವರ್ಷದ ಅಕ್ಕಮ್ಮ ಎಂಬ ಅಕ್ಕನನ್ನ ಡೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಪ್ರಭಾಕರ, ಆತನ ಪುತ್ರ ದಿಲೀಪ ಹಾಗೂ ಪುತ್ರಿ ತ್ರಿವೇಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ಕುಟುಂಬಗಳ ನಡುವೆ ಕಳೆದ 15 ವರ್ಷಗಳಿಂದ ಜಮೀನಿನ ವಿಚಾರಕ್ಕಾಗಿ ಗಲಾಟೆ ಇತ್ತು. ಅಕ್ಕಮ್ಮ ಹಾಗೂ ಸಹೋದರ ಪ್ರಭಾಕರ ಅವರ ಜಮೀನು ವಿವಾದ ಸದ್ಯ ಈಗ ಕೋರ್ಟ್​ನಲ್ಲಿದೆ. ಅಕ್ಕಮ್ಮ ಕೋರ್ಟ್​ನ ಅನುಮತಿ ಪಡೆದು ಜಮೀನು ಅಳತೆ ಮಾಡಲು ಸರ್ವೇಯರ್ ‌ಜೊತೆ ಜಮೀನಿಗೆ ಬಂದಿದ್ದರು. ಸರ್ವೇಯರ್ ಜಮೀನು ಅಳತೆ ಮಾಡಲು ಬಂದಾಗ ನಮ್ಮ ಜಮೀನು ಅಳತೆ ಮಾಡಲು ನೀವು ಯಾರು ಅಂತಾ ದಿಲೀಪ್ ಅಕ್ಕಮ್ಮನ ಮೇಲೆ ಕೊಡಗೋಲಿನಿಂದ ದಾಳಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿಯೇ ಇದ್ದ ಪ್ರಭಾಕರ ಡೊಣ್ಣೆಯಿಂದ ಅಕ್ಕಮ್ಮನ ತಲೆಗೆ ಹೊಡೆದಿದ್ದಾನೆ. ಈ ವೇಳೆ ಕುಸಿದುಬಿದ್ದ ಅಕ್ಕಮ್ಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪ್ರಭಾಕರ್​, ಪೊಲೀಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist