ಬೆಂಗಳೂರು:- ಇವರಿಗೆ ಕಲ್ಯಾಣ ಮಂಟಪಗಳೆ ಟಾರ್ಗೆಟ್. ಮದುವೆ ಛತ್ರಗಳಿಗೆ ಸೈಲೆಂಟ್ ಆಗಿ ಹೋಗುವುದು, ವಧು- ವರರ ರೂಮ್ ಗಳಿಗೆ ಲಗ್ಗೆ ಇಡುವುದು, ಯಾಮಾರಿಸಿ ಚಿನ್ನಾಭರಣ ದೋಚಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುವುದು. ಇದೇ ಇವರ ಪ್ರೊಫೆಷನಲ್. ಇವರೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್.
ಈ ಗ್ಯಾಂಗ್ ಹೆಸರೆ ಬಹಳ ವಿಚಿತ್ರವಾಗಿದೆ. ಮೊದಲು ಈ ಗ್ಯಾಂಗ್ ಬಗ್ಗೆ ಹೇಳುತ್ತಲೇ ಕೇಳಿ.ಮಧ್ಯಪ್ರದೇಶದ ಕಾಡಿಯಾ ಸಾನ್ಸಿ ಎಂಬ ಊರಿನಲ್ಲಿ ಚಿಕ್ಕ ವಯಸ್ಸಿನಿಂದಲೆ ಮಕ್ಕಳಿಗೆ ಕಳ್ಳತನದ ಬಗ್ಗೆ ಟ್ರೈನಿಂಗ್ ಕೊಡಲಾಗುತ್ತದೆ.
ಬಡ ಮಕ್ಕಳನ್ನು ಖರೀದಿಸಿ ಅವರಿಗೆ ನಿಪುಣತೆಯಿಂದ ಕಳ್ಳತನ ಮಾಡುವ ಬಗ್ಗೆ ತರಭೇತಿ ನೀಡಲಾಗುತ್ತದೆ. ಈ ಗ್ಯಾಂಗ್ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಕಳ್ಳತನ ಮಾಡುತ್ತದೆ.
ಇಂತಹ ಚಾಲಾಕಿ ಗ್ಯಾಂಗ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಕೈಚಳಕ ತೋರಿಸಿದೆ. ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಐನಾತಿ ಕಾಡಿಯಾ ಸಾನ್ಸಿ ಗ್ಯಾಂಗ್ ನ್ನು ಕೆಂಗೇರಿ ಪೋಲಿಸರು ಬಂಧಿಸಿದ್ದಾರೆ.
ಈ ಗ್ಯಾಂಗ್ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಬೇರೆ ಬೇರೆ ನಗರಗಳಲ್ಲಿ ಕೂಡ ಆ್ಯಕ್ಟಿವ್ ಆಗಿನ ಎನ್ನಲಾಗಿದೆ. ನೀವು ಎಚ್ಚರಿಕೆಯಿಂದ ಇರಬೇಕಷ್ಟೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?