ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ಗೆ ಶಿರಸಿ ಬಾಲೆ

Twitter
Facebook
LinkedIn
WhatsApp
ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ಗೆ ಶಿರಸಿ ಬಾಲೆ
 

ಶಿರಸಿ(ಜೂ.07): ಕಳೆದ ಏಳು ವರ್ಷಗಳಿಂದ ನಿರಂತರ ವಿಶ್ವಶಾಂತಿ ಸಂದೇಶ ಸಾರುವ ಯಕ್ಷನೃತ್ಯ ರೂಪಕದ ಬಾಲೆ, ತಾಲೂಕಿನ ಬೆಟ್ಟಕೊಪ್ಪದ ತುಳಸಿ ಹೆಗಡೆ ಸಾಧನೆ ಇದೀಗ ದೇಶದ ಪ್ರತಿಷ್ಠಿತ ‘ಇಂಡಿಯಾ ಬುಕ್‌ ರೆಕಾರ್ಡ’ನಲ್ಲಿಯೂ ದಾಖಲಾಗಿದೆ. ವಿಶ್ವಶಾಂತಿ ಸಂದೇಶ ಸಾರುವ ಕಲಾ ಪ್ರದರ್ಶನ ನೀಡುವ ದೇಶದ ಏಕಮೇವ ಬಾಲೆ ಎಂಬುದು ಈಗ ಅಧಿಕೃತವಾಗಿ ಋುಜುವಾತಾಗಿದೆ.

13ರ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಪಡಿಸುವ ಬಾಲೆ ಎಂದೇ ಪ್ರಸಿದ್ಧಿ. ತುಳಸಿಯ ಈ ವಿಶಿಷ್ಟಸಾಧನೆಯನ್ನು ‘ಅತ್ಯಂತ ಕಿರಿಯ ವಯಸ್ಸಿನಿಂದ ವಿಶ್ವಶಾಂತಿ ಸರಣಿ ಸಂದೇಶ ಸಾರುವ ಬಾಲ ಯಕ್ಷಗಾನ ಕಲಾವಿದೆ’ ಎಂದೇ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ನೀಡುವ ಪ್ರಮಾಣಪತ್ರಲ್ಲಿ ಉಲ್ಲೇಖಿಸಿದೆ.

 

ಏ.27ರಂದು ದಾಖಲೀಕರಿಸಿಕೊಂಡ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಸಂಸ್ಥೆ ತುಳಸಿ ಯಕ್ಷಗಾನದ ಕಲಾ ಮಾಧ್ಯಮದ ಮೂಲಕ ಜಗತ್ತಿನ ಯೋಗಕ್ಷೇಮದ ಪ್ರಸ್ತುತಿಗಾಗಿ ಈ ರೂಪಕವನ್ನು ಪ್ರದರ್ಶಿಸುತ್ತಿದ್ದಾಳೆ ಎಂದೂ ಹೆಮ್ಮೆ ವ್ಯಕ್ತಪಡಿಸಿದೆ.


ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರಸ್ತುತಪಡಿಸುತ್ತಿದ್ದಾಳೆ. ಈ ಸಾಧನೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡನಲ್ಲಿ ದಾಖಲಾಗಿದ್ದು, ಯಕ್ಷಗಾನದ ಇತಿಹಾಸದಲ್ಲೂ ಪ್ರಥಮ.

ತುಳಸಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ವರ್ಗದಲ್ಲಿ ಓದುತ್ತಿದ್ದಾಳೆ. ಅವಳ ಸಾಧನೆಯನ್ನು ಇಂಟರ್‌ನ್ಯಾಶನಲ್‌ ಬುಕ್‌ ಆಫ್‌ ರೆಕಾರ್ಡ್‌ ಕೂಡ ದಾಖಲಿಸಿದೆ. ಈಚೆಗಷ್ಟೇ ಪುಣೆಯ ಸಂಸ್ಥೆಯೊಂದು ನೀಡುವ ಇಂಡಿಯನ್‌ ಸ್ಟಾರ್‌ ಐಕಾನ್‌ ಅವಾರ್ಡ್‌ ಕೂಡ ಬಂದಿದೆ ಎಂಬುದೂ ಉಲ್ಲೇಖನೀಯ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ