ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡೋನೇಷ್ಯಾ ಮಾಸ್ಟ​ರ್ಸ್‌: ಸಿಂಧು, ಸೆನ್‌ ಶುಭಾರಂಭ

Twitter
Facebook
LinkedIn
WhatsApp
ಇಂಡೋನೇಷ್ಯಾ ಮಾಸ್ಟ​ರ್ಸ್‌: ಸಿಂಧು, ಸೆನ್‌ ಶುಭಾರಂಭ
 

ಜಕಾರ್ತ(ಜು.09): ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು (PV Sindhu) ಮತ್ತು ಲಕ್ಷ್ಯ ಸೆನ್‌ (Lakshya Sen) ಅವರು ಇಂಡೋನೇಷ್ಯಾ ಮಾಸ್ಟ​ರ್ಸ್‌ ಸೂಪರ್‌ 500 ಬ್ಯಾಡ್ಮಿಂಟನ್‌ (Badminton) ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ. ಬುಧವಾರ ನಡೆದ ಟೂರ್ನಿಯ ಮಹಿಳಾ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಹಣಾಹಣಿಯಲ್ಲಿ ಸಿಂಧು 18-21, 21-5, 21-11ರಿಂದ ಡೆನ್ಮಾರ್ಕ್‌ ಲಿನೆ ಕ್ರಿಸ್ಟೊಫರ್ಸನ್‌ ವಿರುದ್ಧ ಗೆದ್ದರು. 

ಎರಡು ಬಾರಿಯ ಒಲಿಂಪಿಕ್ಸ್‌ ಪದಕ ವಿಜೇತೆ ಸಿಂಧು, ಮುಂದಿನ ಪಂದ್ಯದಲ್ಲಿ ಡೆನ್ಮಾರ್ಕ್ನ ರಾಸ್ಮಸ್‌ ಗೆಮ್ಕೆ ಅವರಿಗೆ ಮುಖಾಮುಖಿಯಾಗಲಿದ್ದಾರೆ. ಇನ್ನು, ಸೆನ್‌ ಅವರು ಪುರುಷರ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ 21-10, 21-18ರಿಂದ ಡೆನ್ಮಾರ್ಕ್ನ ಹ್ಯಾನ್ಸ್‌ ಕ್ರಿಸ್ಟಿಯನ್‌ ಅವರನ್ನು ಮಣಿಸಿದರು. ಆದರೆ ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಆಕರ್ಷಿ ಕಶ್ಯಪ್‌ ಅಮೆರಿಕದ ಬಿವೆನ್‌ ಜಾಂಗ್‌ ವಿರುದ್ಧ ಸೋತರೆ, ಪುರುಷರ ಸಿಂಗಲ್ಸ್‌ನಲ್ಲಿ ಸಮೀರ್‌ ವರ್ಮಾ ಇಂಡೋನೇಷ್ಯಾದ ಚಿಕೊ ಔರಾ ವಿರುದ್ಧ ಪರಾಭವಗೊಂಡರು.

ಖೇಲೋ ಇಂಡಿಯಾ: ಚಿನ್ನ ಸೇರಿ ಕರ್ನಾಟಕಕ್ಕೆ 6 ಪದಕ

ಪಂಚಕುಲ: 2ನೇ ಆವೃತ್ತಿಯ ಖೇಲೋ ಇಂಡಿಯಾ (Khelo India) ಕಿರಿಯರ ಕ್ರೀಡಾಕೂಟದಲ್ಲಿ ಕರ್ನಾಟಕ ಬುಧವಾರ ಚಿನ್ನ ಸೇರಿದಂತೆ ಒಟ್ಟು 6 ಪದಕಗಳನ್ನು ಗೆದ್ದುಕೊಂಡಿದೆ. ಬಾಲಕಿಯರ ವಿಭಾಗದ 100 ಮೀ. ಹರ್ಡಲ್ಸ್‌ನಲ್ಲಿ ಚಿನ್ನ ಗೆದ್ದ ಉನ್ನತಿ ರಾಜ್ಯದ ಬಂಗಾರ ಗಳಿಕೆಯನ್ನು 2ಕ್ಕೆ ಏರಿಸಿದರು. ಇನ್ನು, 500 ಗ್ರಾಂ. ಜಾವೆಲಿನ್‌ ಎಸೆತದಲ್ಲಿ ರಮ್ಯಶ್ರೀ ಜೈನ್‌ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. 

 

ಹೈ ಜಂಪ್‌ ಸ್ಪರ್ಧೆಯಲ್ಲಿ ರಾಜ್ಯದ ಸಿಂಚನಾ ಬೆಳ್ಳಿ ಹಾಗೂ ಪವಣ್‌ ನಾಗರಾಜ್‌ ಅವರು ಕಂಚಿನ ಪದಕ ಕೊಳ್ಳೆ ಹೊಡೆದರು. ಬಾಲಕರ ವಿಭಾಗದಲ್ಲಿ ತ್ರಿಪಲ್‌ ಜಂಪ್‌ನಲ್ಲಿ ಅಖಿಲೇಶ್‌ ಬೆಳ್ಳಿ ಪದಕ ಗೆದ್ದರು. ಕುಸ್ತಿಯ 55 ಕೆ.ಜಿ. ಫ್ರೀಸ್ಟೈಲ್‌ನಲ್ಲಿ ಅಮಿತ್‌ ಕಂಚು ಗೆದ್ದರು. ಇದರೊಂದಿಗೆ ರಾಜ್ಯ ತಂಡ 2 ಚಿನ್ನ, 4 ಬೆಳ್ಳಿ ಹಾಗೂ 5 ಕಂಚಿನ ಸೇರಿ ಒಟ್ಟು 11 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದೆ. 87 ಪದಕದೊಂದಿಗೆ ಹರಾರ‍ಯಣ ಮೊದಲ ಸ್ಥಾನ ಕಾಯ್ದುಕೊಂಡಿದ್ದು, 73 ಪದಕ ಗೆದ್ದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ.

ನಾರ್ವೆ ಚೆಸ್‌: ಏಳನೇ ಸುತ್ತಲ್ಲಿ ಗೆದ್ದ ಆನಂದ್‌

ಸ್ಟಾವೆಂಜರ್‌(ನಾರ್ವೆ): ಭಾರತದ ವಿಶ್ವನಾಥನ್ ಆನಂದ್‌ ಅವರು ನಾರ್ವೆ ಚೆಸ್‌ ಟೂರ್ನಿಯ ಏಳನೇ ಸುತ್ತಿನಲ್ಲಿ ಅಜರ್‌ಬೈಜಾನ್‌ನ ತೈಮೂರ್‌ ರಜಬೊವ್‌ ಅವರನ್ನು ಮಣಿಸಿದರು. ಬುಧವಾರ ನಡೆದ ಆನಂದ್‌-ರಜಬೊವ್‌ ನಡುವಿನ ಕ್ಲಾಸಿಕಲ್‌ ಪಂದ್ಯ 42 ನಡೆಗಳ ಬಳಿಕ ಡ್ರಾದಲ್ಲಿ ಕೊನೆಗೊಂಡಿತು. ಫಲಿತಾಂಶ ನಿರ್ಣಯಿಸಲು ನಡೆದ ಸಡನ್‌ ಡೆತ್‌ ಗೇಮ್‌ನಲ್ಲಿ ಆನಂದ್‌ 25 ನಡೆಗಳಲ್ಲಿ ಜಯ ಸಾಧಿಸಿದರು. ಆದರೆ ಏಳು ಸುತ್ತುಗಳ ಬಳಿಕ 13 ಅಂಕಗಳನ್ನು ಹೊಂದಿರುವ ಅವರು ಎರಡನೇ ಸ್ಥಾನದಲ್ಲೇ ಬಾಕಿಯಾಗಿದ್ದಾರೆ. ಇನ್ನು, ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್‌ ಕಾಲ್‌ರ್‍ಸನ್‌ ಏಳನೇ ಸುತ್ತಿನಲ್ಲಿ ತಮ್ಮದೇ ದೇಶದ ಆರ್ಯನ್‌ ತರಿ ಎದುರು ಆಘಾತ ಅನುಭವಿಸಿದರು. ಆದರೂ 13.5 ಅಂಕ ಹೊಂದಿರುವ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ