ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

Twitter
Facebook
LinkedIn
WhatsApp
congress

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ (Congress) ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕಳೆದ ಎರಡು ದಿನಗಳಲ್ಲಿ ದೆಹಲಿಯಲ್ಲೇ ಬೀಡುಬಿಟ್ಟು ಮ್ಯಾರಥಾನ್ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಇಂದು(ಏಪ್ರಿಲ್ 06) ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ 100 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಲು ಬುಧವಾರ ಇಡೀ ದಿನ ನಡೆದ ಕಸರತ್ತಿನ ನಂತರ ಸುಮಾರು 50 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿದ್ದು, ಈ ಪಟ್ಟಿಯಲ್ಲಿ ಸಿದ್ದರಾಮಯ್ಯನವರ ಎರಡನೇ ಕ್ಷೇತ್ರ ಇರುತ್ತಾ? ಎನ್ನುವುದು ಕುತೂಹಲ ಮೂಡಿಸಿದೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಡಿ.ಕೆ.ಶಿವಕುಮಾರ್, ಸೂರ್ಯ ಉದಯವಾಗುವ ತನಕ ಕಾಯಿರಿ ಎಂದು ಹೇಳಿದ್ದಾರೆ. ಅಂದ್ರೆ ಇಂದು ಬೆಳಗ್ಗೆ ಕಾಂಗ್ರೆಸ್​​​​ ಟಿಕೆಟ್ ಬಿಡುಗಡೆಯಾಗುವ ಸೂಚನೆಯನ್ನು ಡಿಕೆಶಿ ಕೊಟ್ಟಿದ್ದಾರೆ. ಡಿಕೆಶಿ ಬಳಿಕ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಬೆಳಗ್ಗೆ 11 ಗಂಟೆಯೊಳಗೆ ಟಿಕೆಟ್ ರಿಲೀಸ್ ಆಗಲಿದೆ ಎಂದಿದ್ದಾರೆ.

ಬಾಕಿ ಉಳಿದಿರುವುದರಲ್ಲಿ ಶೇ.50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಎರಡಕ್ಕಿಂತ ಹೆಚ್ಚು ಹೆಸರುಗಳು ಚುನಾವಣಾ ಸಮಿತಿ ಸಭೆ ಮುಂದೆ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರವೇ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಗರಂ ಆಗಿದ್ದರು. ಒಂದು ಅಥವಾ ಎರಡು ಹೆಸರುಗಳಿರುವ ಪಟ್ಟಿಯನ್ನಷ್ಟೇ ಚುನಾವಣಾ ಸಮಿತಿ ಮುಂದೆ ತನ್ನಿ ಎಂದು ಖಡಕ್‌ ಸೂಚನೆ ನೀಡಿದ್ದರು. ಅದರಂತೆ ಮತ್ತೊಮ್ಮೆ ಸಭೆ ಸೇರಿದ ಸ್ಕ್ರೀನಿಂಗ್‌ ಕಮಿಟಿಯು ಎರಡಕ್ಕಿಂತ ಹೆಚ್ಚು ಹೆಸರುಗಳಿರುವ ಕ್ಷೇತ್ರಗಳಲ್ಲಿ ಸಂಭಾವ್ಯರ ಸಂಖ್ಯೆಯನ್ನು ಎರಡಕ್ಕಿಳಿಸುವ ಕಾರ್ಯವನ್ನು ಬುಧವಾರ ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಿದೆ.

ಆ ಬಳಿಕ ಕಾಂಗ್ರೆಸ್‌ ಚುನಾವಣಾ ಸಮಿತಿಯು ಸಂಜೆ 4.30ರಿಂದ ಸುಮಾರು 2 ಗಂಟೆಗಳ ಕಾಲ ಎರಡನೇ ಪಟ್ಟಿಕುರಿತು ಚರ್ಚೆ ನಡೆಸಿದೆ. ಸದ್ಯಕ್ಕೆ ಸಭೆ ಅಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 2.30 ವೇಳೆಗೆ ಮತ್ತೆ ಸಮಿತಿ ಸಭೆ ಸೇರಲಿದೆ. ಈ ಸಭೆಯಲ್ಲಿ ತೀವ್ರ ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೂಲಗಳ ಪ್ರಕಾರ ಎರಡನೇ ಪಟ್ಟಿಗುರುವಾರ ಬಿಡುಗಡೆಯಾದರೂ ಅನಂತರದ ಪಟ್ಟಿಯೇನಿದ್ದರೂ ಬಿಜೆಪಿಯ ಪಟ್ಟಿ ಪ್ರಕಟವಾದ ನಂತರವೇ ಬಿಡುಗಡೆ ಮಾಡಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ, ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿದ್ದು, ಅವರಿಗಾಗಿ ಟಿಕೆಟ್​ ಕಾಯ್ದಿರಿಸಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist