ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇದೇ ಮೊದಲ ಬಾರಿಗೆ ಮೈದಾನದಲ್ಲಿ ಕಣ್ಣೀರಿಟ್ಟ ಕೊಹ್ಲಿ, ಕಿಂಗ್‌ಗೆ ದಿಗ್ಗಜರ ಸಲಾಂ!

Twitter
Facebook
LinkedIn
WhatsApp

ಈ ರೋಚಕ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಸಂಭ್ರಮಿಸಿದರೂ ಆ ಬಳಿಕ ಭಾವುಕರಾದರು. ಭಾರತ ತಂಡಕ್ಕೆ ಗೆಲುವು ತಂದುಕೊಟ್ಟ ಖುಷಿಯಲ್ಲೇ ಕಣ್ಣೀರಾದರು.

ವಿರಾಟ್ ಕೊಹ್ಲಿ ಕ್ರಿಕೆಟ್‌ನ ಉತ್ತುಂಗ ಹಾಗೂ ಪಾತಾಳ ಎರಡೂ ಅನುಭವಿಸಿದ್ದಾರೆ. ಸತತ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರೆ. ಸತತ ಕಳಫೆ ಫಾರ್ಮ್ ಮೂಲಕ ಟೀಕೆಯೂ ಅನುಭವಿಸಿದ್ದಾರೆ. ಆದರೆ ಯಾವತ್ತೂ ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಕಣ್ಣೀರಿಟ್ಟಿಲ್ಲ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಕೊಹ್ಲಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇತ್ತ ದಿಗ್ಗಜರು ಕೊಹ್ಲಿಗೆ ಸಲಾಂ ಹೇಳಿದ್ದಾರೆ.

ಮೆಲ್ಬೋರ್ನ್(ಅ.23): ಪಾಕಿಸ್ತಾನ ವಿರುದ್ದದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತು. 53 ಎಸೆತದಲ್ಲಿ ಅಜೇಯ 82 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಟೀಂ ಇಂಡಿಯಾದ ದೀಪಾವಳಿ ಸಂಭ್ರಮ ಡಬಲ್ ಮಾಡಿದರು. ಅಂತಿಮ ಎಸೆತದಲ್ಲಿ ಭಾರತ ಗೆಲವಿನ ದಡ ಸೇರುತ್ತಿದ್ದಂತೆ ವಿರಾಟ್ ಕೊಹ್ಲಿ ಎಂದಿನಂತೆ ಅಗ್ರೆಶನ್ ಸೆಲೆಬ್ರೆಷನ್ ಮಾಡಿದ್ದಾರೆ. ಆದರೆ ಈ ಸೆಲೆಬ್ರೇಷನ್ ಅಂತ್ಯದಲ್ಲಿ ಕೊಹ್ಲಿ ಕಣ್ಣೀರಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಣ್ಮೀರಿಟ್ಟಿದ್ದಾರೆ. ಅದೆಂತಾ ಪರಿಸ್ಥಿತಿಯನ್ನು ಎದುರಿಸುತ್ತಿದ್ದ ಕೊಹ್ಲಿ ಈ ಬಾರಿ ನಿಯಂತ್ರಿಸಲು ಸಾಧ್ಯವಾಗದೆ ಆನಂದ ಬಾಷ್ಪ ಸುರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊಹ್ಲಿ ಅದ್ಭುತ ಆಟ, ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..!

ವಿರಾಟ್ ಕೊಹ್ಲಿ ಸ್ಫೋಟಕ ಇನ್ನಿಂಗ್ಸ್ ಮೂಲಕ ಪಂದ್ಯ ಗೆಲ್ಲಿಸಿಕೊಡುತ್ತಿರುವುದು ಇದು ಮೊದಲಲ್ಲ. ಪಾಕಿಸ್ತಾನ ಸೇರಿದಂತೆ ಎಲ್ಲಾ ಬಲಿಷ್ಠ ತಂಡಗಳ ವಿರುದ್ಧ ಕೊಹ್ಲಿ ಹೋರಾಡಿ ಗೆಲುವು ತಂದುಕೊಟ್ಟಿದ್ದಾರೆ. ಆದರೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಪಾಕಿಸ್ತಾನ ವಿರುದ್ಧ ಸ್ಫೋಟಕ ಇನಿಂಗ್ಸ್ ಮೂಲಕ ಟೀಂ ಇಂಡಿಯಾಗೆ ಗೆಲುವು ನೀಡಿರುವುದರಲ್ಲಿ ಹಲವು ವಿಶೇಷತೆಗಳಿವೆ. ಪಾಕಿಸ್ತಾನ ವಿರುದ್ಧ ಏಷ್ಯಾಕಪ್ ಟೂರ್ನಿಯಲ್ಲಿನ ಸೋಲು, ಸತತ ಕಳಪೆ ಫಾರ್ಮ್‌ನಿಂದ ಎದುರಿಸಿದ ಟೀಕೆಗಳಿಂದ ಕೊಹ್ಲಿ ಝರ್ಝರಿತರಾಗಿದ್ದರು. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು ದಿಟ್ಟ ಹೋರಾಟ ನೀಡಿದರು. ಇಷ್ಟೇ ಅಲ್ಲ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. 

ಆರ್ ಅಶ್ವಿನ್ ಅಂತಿಮ ಎಸೆತದಲ್ಲಿ ಬೌಂಡರಿ ಸಿಡಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಸಂಭ್ರಮ ಆರಂಭಗೊಂಡಿದೆ. ಇದೀಗ ಕ್ರಿಕೆಟ್ ಅಂಗಳದ ಆಕ್ರಮಣಕಾರಿ ಆಟಗಾರನೆಂದೇ ಖ್ಯಾತರಾಗಿರುವ ಕಿಂಗ್ ಕೊಹ್ಲಿಯ ಕಣ್ಣೀರಿನ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ