ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಡಿಯೋ ಮಾಡೋ ಹುಚ್ಚಾಟಕ್ಕೆ ಮೂವರು ಬಾಲಕರ ಸಾವು!!!

Twitter
Facebook
LinkedIn
WhatsApp
ವಿಡಿಯೋ ಮಾಡೋ ಹುಚ್ಚಾಟಕ್ಕೆ ಮೂವರು ಬಾಲಕರ ಸಾವು!!!

ಬೆಂಗಳೂರು(ಮೇ.27): ನಗರದ ದೊಡ್ಡಗುಬ್ಬಿ ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಗುರುವಾರ ನಡೆದಿದೆ.
ಸಾರಾಯಿಪಾಳ್ಯ ನಿವಾಸಿಗಳಾದ ಇಮ್ರಾನ್‌ ಪಾಷ (17), ಮುಬಾರಕ್‌ (17) ಹಾಗೂ ಸಾಹಿಲ್‌ (15) ಮೃತರು. ಮಧ್ಯಾಹ್ನ 1.40ರ ಸುಮಾರಿಗೆ ಈ ಘಟನೆ ಜರುಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಕೊತ್ತನೂರು ಠಾಣೆ ಪೊಲೀಸರು ಮೂವರ ಮೃತದೇಹಗಳಿಗಾಗಿ ಕೆರೆಯಲ್ಲಿ ಕಾರ್ಯಾಚರಣೆ ನಡೆಸಿದರು. ಸಂಜೆ ಆರು ಗಂಟೆ ವರೆಗೂ ಸತತ ಐದು ತಾಸು ಕಾರ್ಯಾಚರಣೆ ನಡೆದರೂ ಮೃತದೇಹಗಳು ಪತ್ತೆಯಾಗಿಲ್ಲ. ಕತ್ತಲಾದ ಪರಿಣಾಮ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಬೆಳಗ್ಗೆ ಮೃತದೇಹಗಳ ಪತ್ತೆ ಕಾರ್ಯಾಚರಣೆ ಮುಂದುವರೆಯಲಿದೆ ಅಧಿಕಾರಿಗಳು ತಿಳಿಸಿದ್ದಾರೆ.
ಎಲಿಮೆಂಟ್‌ ಮಾಲ್‌ನ ಪಿವಿಆರ್‌ನಲ್ಲಿ ಹೆಲ್ಪರ್‌ ಕೆಲಸ ಮಾಡುವ ಮೃತ ಇಮ್ರಾನ್‌ ಪಾಷ ಗುರುವಾರ ಮಧ್ಯಾಹ್ನ ಸಾರಾಯಿಪಾಳ್ಯದ ನಿವಾಸಿಗಳಾದ ಸ್ನೇಹಿತರಾದ ಮುಬಾರಕ್‌, ಸಾಹಿಲ್‌, ಶಾಹಿದ್‌, ಅಬ್ದುಲ್‌ ರೆಹಮಾನ್‌ರನ್ನು ಭೇಟಿಯಾಗಿ ಕಳೆದ ವಾರ ನಾನು ದೊಡ್ಡಗುಬ್ಬೆ ಕೆರೆಗೆ ಹೋಗಿ ಈಜಾಡಿಕೊಂಡು ಬಂದಿದ್ದೇನೆ ಎಂದು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ವಿಡಿಯೋ ತೋರಿಸಿದ್ದಾನೆ. ಈ ವಿಡಿಯೊ ಇನ್ಸ್‌ಟಾಗ್ರಾಮ್‌ನಲ್ಲಿ ಅಪ್ಲೋಡ್‌ ಮಾಡಿರುವುದಾಗಿ ವಿಡಿಯೊ ತೋರಿಸಿದ್ದಾನೆ. ಬಳಿಕ ಕೆರೆಯಲ್ಲಿ ಈಜಾಡೋಣ ಎಂದು ಪುಸಲಾಯಿಸಿ ಬಾಡಿಗೆ ಆಟೋದಲ್ಲಿ ನಾಲ್ವರನ್ನು ಜತೆಯಲ್ಲಿ ಕರೆದುಕೊಂಡು ದೊಡ್ಡಗುಬ್ಬಿ ಕೆರೆ ಬಳಿ ಬಂದಿದ್ದಾನೆ.ಈಜಾಡುವ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ವಿಡಿಯೊ ಮಾಡುವ ಉದ್ದೇಶದಿಂದ ಬಾಲಕರು ಕೆರೆ ಬಳಿ ಬಂದಿದ್ದರು. ಅಬ್ದುಲ್‌ ರೆಹಮಾನ್‌ ಮತ್ತು ಶಾಹಿದ್‌ಗೆ ದಡದಲ್ಲಿ ನಿಂತು ವಿಡಿಯೊ ಮಾಡಲು ಹೇಳಿ ಮೂವರು ಒಟ್ಟಿಗೆ ನೀರಿಗೆ ಧುಮುಕಿದ್ದರು. ಕೆರೆಯಲ್ಲಿ ಈಜಾಡುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಲು ನಿರ್ಧರಿಸಿದ್ದರು. ಇದೀಗ ವಿಡಿಯೊ ಹುಚ್ಚಾಟಕ್ಕೆ ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ತಕ್ಷಣ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಬಂದ ಅಗ್ನಿಶಾಮ ಸಿಬ್ಬಂದಿ ಸಂಜೆ ಆರು ಗಂಟೆ ವರೆಗೂ ಕಾರ್ಯಾಚರಣೆ ಮಾಡಿದರೂ ಮೃತದೇಹಗಳು ಪತ್ತೆಯಾಗಲಿಲ್ಲ. ಈ ಸಂಬಂಧ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ