ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

Twitter
Facebook
LinkedIn
WhatsApp
DB 04122022 police 2

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕರು (Teacher) ಮಾಡಿದ ಎಡವಟ್ಟಿಗೆ ಇಬ್ಬರು ವಿದ್ಯಾರ್ಥಿಗಳು (Student) ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bengaluru Rural) ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಬಾಗಲೂರು ಬಳಿಯ ರಜಾಕ್ ಪಾಳ್ಯದ ವಿದ್ಯಾರ್ಥಿ ಜುನೈದ್ (14), ಹಾಗೂ ಹೊಸಕೋಟೆ ತಾಲೂಕು ವಳಗೆರೆಪುರದ ವಿದ್ಯಾರ್ಥಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳಿಬ್ಬರು ದೇವನಾಯಕನಹಳ್ಳಿ ಗ್ರಾಮದ ಬಳಿ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai School) 8ನೇ ತರಗತಿಯಲ್ಲಿ ಓದುತ್ತಿದ್ದರು.

ವಸತಿ ಶಾಲೆಯಲ್ಲಿದ್ದ 188 ವಿದ್ಯಾರ್ಥಿಗಳಲ್ಲಿ 98 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಉಳಿದ 94 ವಿದ್ಯಾರ್ಥಿಗಳಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶಾಲೆಯ ಪ್ರಭಾರ ಜವಾಬ್ದಾರಿ ವಹಿಸಿಕೊಂಡಿದ್ದ ಕಂಪ್ಯೂಟರ್ ಶಿಕ್ಷಕಿ ರಶ್ಮಿ, ವೀಣಾ, ಕಾವಲುಗಾರ ಪ್ರಸನ್ನ ಪಿಕ್ನಿಕ್ ವಾಕಿಂಗ್ ಅಂತ ಶಾಲೆಯ ಹಿಂಭಾಗದ ಕುಂಟೆ ಕಡೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ 5 ಮಂದಿ ವಿದ್ಯಾರ್ಥಿಗಳು ಕುಂಟೆಯಲ್ಲಿ ಈಜಾಡಲು ಧುಮುಕಿದ್ದು, ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು ಉಳಿದ ಮೂವರು ಆಸ್ಪತ್ರೆ (Hospital) ಸೇರಿದ್ದಾರೆ. ಶ್ರೇಯಸ್‌ ಎಂಬ ವಿದ್ಯಾರ್ಥಿಯನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿದ್ದು, ಅಬ್ದುಲ್ ಅಮೀದ್, ಹಾಗೂ ಸುಹೇಲ್ ಖಾನ್ ಎಂಬ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಘಟನೆಯಲ್ಲಿ ಜುನೈದ್ ಹಾಗೂ ಸಂತೋಷ್ ಸಾವನ್ನಪ್ಪಿದ್ದು, ಮೃತರ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಅಲ್ಪಸಂಖ್ಯಾತರ ಇಲಾಖೆಯ ಜಂಟಿ‌ನಿರ್ದೇಶಕ ಸಾಬೀರ್ ಮುಲ್ಲಾ ಸೇರಿದಂತೆ ತಹಶೀಲ್ದಾರ್ ಶಿವರಾಜ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಇನ್ನೂ ಘಟನೆಗೆ ಕಾರಣೀಕರ್ತರಾದ ಶಿಕ್ಷಕಿಯರಾದ ರಶ್ಮಿ ಹಾಗೂ ವೀಣಾ, ಸೇರಿದಂತೆ ಕಾವಲುಗಾರ ಪ್ರಸನ್ನ ಹಾಗೂ ಮುಖ್ಯ ಶಿಕ್ಷಕ ಶಿವಮೂರ್ತಿ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist