![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಕೃಪೆ(ತೈವಾನ್): ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಇತರ ದೇಶಗಳ ಅಂತಾರಾಷ್ಟ್ರೀಯ ಸಂಬಂಧಗಳಲ್ಲೂ ಗಮನಾರ್ಹ ಬದಲಾವಣೆಯಾಗುತ್ತಿದೆ. ಅಮೆರಿಕದ ಮನವಿಯ ಮೇರೆಗೆ ಸಾಕಷ್ಟು ರಾಷ್ಟ್ರಗಳು ರಷ್ಯಾದ ಮೇಲೆ ಹಲವು ರೀತಿಯ ಆರ್ಥಿಕ ನಿರ್ಬಂಧಗಳನ್ನು ಹೇರುತ್ತಿವೆ. ಈ ಬೆನ್ನಲ್ಲೇ ತೈವಾನ್ ಕೂಡಾ ‘ನಿರ್ಬಂಧ ಹೇರುವ’ ರಾಷ್ಟ್ರಗಳ ಪಟ್ಟಿಗೆ ಸೇರ್ಪಡೆಯಾಗಿದೆ.
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ, ಚೀನಾ ಮತ್ತು ತೈವಾನ್ ಸಂಬಂಧಗಳೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೀಡಾಗುತ್ತಿವೆ. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ತೈವಾನ್ ರಷ್ಯಾದ ಮೇಲೆ ಅಂತಾರಾಷ್ಟ್ರೀಯ ನಿರ್ಬಂಧಗಳನ್ನು ಬೆಂಬಲಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ತೈವಾನ್ ವಿದೇಶಾಂಗ ಸಚಿವಾಲಯ, ಶಾಂತಿಯುತ ರಾಜತಾಂತ್ರಿಕ ಮಾತುಕತೆಗಳ ಮೂಲಕ ವಿವಾದಗಳನ್ನು ಪರಿಹರಿಸಿಕೊಳ್ಳಬೇಕಾಗಿತ್ತು. ಇದಕ್ಕೆ ಬದಲಾಗಿ ರಷ್ಯಾ ಬೆದರಿಸಲು ಮುಂದಾಗಿದೆ. ಸರ್ಕಾರ ರಷ್ಯಾದ ನಡೆಗೆ ವಿಷಾದ ವ್ಯಕ್ತಪಡಿಸುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಉಕ್ರೇನ್ ವಿರುದ್ಧದ ತನ್ನ ಮಿಲಿಟರಿ ಆಕ್ರಮಣವನ್ನು ರಷ್ಯಾ ನಿಲ್ಲಿಸಬೇಕು. ಸಾಧ್ಯವಾದಷ್ಟು ಬೇಗ ಉಭಯ ರಾಷ್ಟ್ರಗಳ ನಡುವೆ ಶಾಂತಿಯುತ ಮಾತುಕತೆ ನಡೆಯಬೇಕು. ಶಾಂತಿಯುತವಾಗಿ ಮಾತುಕತೆಗಳು ಆರಂಭವಾಗುವವರೆಗೆ ಅಂತಾರಾಷ್ಟ್ರೀಯ ಆರ್ಥಿಕ ನಿರ್ಬಂಧಗಳನ್ನು ರಷ್ಯಾ ಮೇಲೆ ತೈವಾನ್ ಘೋಷಿಸುತ್ತದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist