ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿಯಲ್ಲಿ ಮಂಗಳಮುಖಿಯರಿಂದ ರಾತ್ರಿ ಪ್ರಯಾಣಿಕರಿಗಾಗಿ ಹೋಟೆಲ್ ಉದ್ಯಮ ಆರಂಭ

Twitter
Facebook
LinkedIn
WhatsApp
ಉಡುಪಿಯಲ್ಲಿ ಮಂಗಳಮುಖಿಯರಿಂದ ರಾತ್ರಿ ಪ್ರಯಾಣಿಕರಿಗಾಗಿ ಹೋಟೆಲ್ ಉದ್ಯಮ ಆರಂಭ

ಉಡುಪಿ: ನಮ್ಮ ಸಮಾಜದಲ್ಲಿ ಇಂದಿಗೂ ಮಂಗಳಮುಖಿಯರನ್ನು ಕೀಳಿರಮೆಯಿಂದ ಕಾಣುವ ಮನೋಭಾವ ಇದೆ. ತೃತೀಯ ಲಿಂಗಿಯರನ್ನು ನಾವು ಬಸ್​ಸ್ಟ್ಯಾಂಡ್​, ರೇಲ್ವೆ ನಿಲ್ದಾಣ ಅಥವಾ ಮಾರುಕಟ್ಟೆಗಳಲ್ಲಿ ಚಪ್ಪಾಳೆ ತಟ್ಟಿ ಹಣ ಬೇಡುವುದನ್ನು ಕಂಡಿದ್ದೇವೆ. ಇವರನ್ನು ಕಂಡಾಕ್ಷಣ ಅಸಹ್ಯ ಪಡುತ್ತೇವೆ, ದೂರ ಸರಿಯುತ್ತೇವೆ. ಇನ್ನು ತೃತೀಯ ಲಿಂಗಿಯರು ಕೂಡ ಸಮಾಜದ ಮುನ್ನಲೆಗೆ ಬಂದು ಸಾಧನೆ ಮಾಡುವಲ್ಲಿ ಹಿಂಜರಿಯುತ್ತಿದ್ದು, ಇದಕ್ಕೆ ಕಾರಣ ನಾವು, ನೀವೆಲ್ಲ ಎಂದರೇ ತಪ್ಪಾಗಲಿಕ್ಕಿಲ್ಲ. ಆದರೆ ಇದು ಈಗ ಬದಲಾಗಿದೆ. ತೃತೀಯ ಲಿಂಗಿ ಜೋಗತಿ ಮಂಜಮ್ಮ ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಈ ಮೂಲಕ ಮಂಗಳಮುಖಿಯರ ಮೇಲಿದ್ದ ಕೆಟ್ಟ ಭಾವನೆ ಮರೆಯಾಗುತ್ತಿದೆ. ಇದರಂತೆ ಉಡುಪಿಯಲ್ಲಿ ಮೂವರು ತೃತೀಯ ಲಿಂಗಿಯರು ದುಡಿದು ತಿನ್ನುವ ಛಲದಿಂದ ಹೋಟೆಲ್​ವೊಂದನ್ನು ತೆರೆದಿದ್ದಾರೆ.

ಹೌದು ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆಗೆದಿದ್ದಾರೆ. ಮೂಲತಃ ಈ ಮೂವರು ಬೇರೆ ಬೇರೆ ಜಿಲ್ಲೆಯವರಾಗಿದ್ದು, ಒಟ್ಟಾಗಿ ಹೋಟೆಲ್​ ತೆರೆದಿರುವುದು ವಿಶೇಷವಾಗಿದೆ. ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ. ಹೌದು ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ. ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಿದೆ.

ರಾತ್ರಿ ಸಮಯದಲ್ಲಿ ಉಡುಪಿಯಲ್ಲಿ ಭಾಗಶಃ ಎಲ್ಲ ಹೋಟೆಲ್​ಗಳು ಬಂದಾಗಿರುತ್ತವೆ. ಈ ಸಮಯದಲ್ಲಿ ರಾತ್ರಿ ಪ್ರಯಾಣಿಕರಿಗೆ ಮತ್ತು ರಾತ್ರಿ ಪಾಳಯದಲ್ಲಿ ಕೆಲಸ ಆಡುವ ಜನರಿಗೆ ಆಹಾರ ಸಿಗುವುದಿಲ್ಲ. ಹೀಗಾಗಿ ಮೂವರು ತೃತೀಯ ಲಿಂಗಿಗಳು ಪ್ರಾರಂಭಿಸಿದ ಈ ಹೋಟೆಲ್​ ಜನರಿಗೆ ತುಂಬಾ ಅನುಕೂಲಕರವಾಗಿದೆ. ಇನ್ನೂ ಈ ಹೋಟೆಲ್​ನಲ್ಲಿ ಲಘು ಉಪಹಾರ ಸಿಗುತ್ತಿದ್ದು, ಸಾಕಷ್ಟು ಜನರು ಬಂದು ಸವಿಯುತ್ತಿದ್ದಾರೆ.

ಈ ಬಗ್ಗೆ ಓರ್ವ ತೃತೀಯ ಲಿಂಗಿ ಮಾತನಾಡಿ ಹೋಟೆಲ್​ ಪ್ರಾರಂಭಿಸಿದಾಗಿನಿಂದ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತು ನಮ್ಮ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಹಾಗೇ ಈ ವೃತ್ತಿ ನಮಗೆ ಹೊಸ ಬದುಕು ನೀಡಿದೆ ಮತ್ತು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಈ ಹೋಟೆಲ್​ನ್ನು ಪ್ರಾರಂಭಿಸಲು ರಾಜ್ಯದಲ್ಲೇ ಎಂಬಿಎ ಪದವಿ ಪಡೆದ ಮೊದಲ ತೃತೀಯ ಲಿಂಗಿ ಸಮಿಕ್ಷಾ ಕುಂದರ್ ಧನ ಸಹಾಯ ಮಾಡಿದ್ದಾರೆ. ಈ ಮೂಲಕ ತೃತೀಯ ಲಿಂಗಿ ಮೇಲೆ ಇದ್ದ ಸಮಾಜದ ಕೆಟ್ಟ ಭಾವನೆ ಹೋಗಲಾಡಿಸಲು ಸಹಾಯವಾಗಲಿದೆ. ಹಾಗೇ ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳಲು ಅನುಕೂಲಕರವಾಗಲಿದೆ.

ಈ ಮೂವರು ತಮ್ಮ ಮನೆಯಲ್ಲೇ ಆಹಾರ ತಯಾರಿಸುತ್ತಾರೆ. ಇವರು ಸಣ್ಣದಾಗಿ ಪ್ರಾರಂಭಿಸಿದ ಉದ್ಯಮ ಎತ್ತರಕ್ಕೆ ಬೆಳೆಯಲಿ. ಮತ್ತು ಇವರ ಈ ಹೊಸ ಪ್ರಯತ್ನವನ್ನು ಜನರು ಸ್ವಾಗತಿಸಿದ್ದು ಸಂತಸ ತಂದಿದೆ. ಮತ್ತು ಅವರು ಸಖಾರಾತ್ಮಕವಾಗಿ ಕೆಲಸವನ್ನು ಪ್ರಾರಂಭಿಸಿದ್ದಾರೆ. ಈ ಕಾರ್ಯದಲ್ಲಿ ಅವರು ಯಶಸ್ಸು ಕಾಣಲಿ ಎಂದು ಸಮಿಕ್ಷಾ ಕುಂದರ್ ಹಾರೈಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist