
ಉಡುಪಿ: ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂ ಲಾಕರ್ ಡೋರ್ ಮುರಿದು ಕಳವು ಮಾಡಲು ಪ್ರಯತ್ನಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಬಂಧಿತ ಆರೋಪಿಯನ್ನು ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆಯ ಹನುಮಂತ (19) ಎಂದು ಗುರುತಿಸಲಾಗಿದೆ.
ಎಟಿಎಂ ಲಾಕರ್ ಡೋರ್ ಮುರಿದು ಕಳವು ಮಾಡಲು ಪ್ರಯತ್ನಿಸಿರುವ ಕುರಿತು ಇಲೆಕ್ಟ್ರಾನಿಕ್ ಪೆಮೆಂಟ್ ಸರ್ವಿಸ್ ಕಂಪೆನಿಯಲ್ಲಿ ಜನರಲ್ ಮ್ಯಾನೇಜರ್ ಆಗಿರುವ, ಉಡುಪಿ ಮತ್ತು ಮಂಗಳೂರಿನ ಕೆನರಾ ಬ್ಯಾಂಕ್ ಎಟಿಎಂ ಶಾಖೆಗಳಿಗೆ ಹಣವನ್ನು ತುಂಬಿಸುವ ಕೆಲಸ ಮಾಡುತ್ತಿರುವ ಸೈಮನ್ ಡಿ ಸೋಜ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆಗೆ ಹೋಗಿ ಆರೋಪಿಯನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದು ದಸ್ತಗಿರಿ ನಿಯಮ ಪಾಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಐ.ಪಿ.ಎಸ್, ಉಡುಪಿ ರವರ ಆದೇಶದಂತೆ, ಸಿದ್ದಲಿಂಗಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಸುಧಾಕರ ಸದಾನಂದ ನಾಯ್ಕ್, ಡಿವೈಎಸ್ಪಿ ಉಡುಪಿ ರವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ, ಪಿ.ಎಸ್.ಐ-1 ಮಹೇಶ್ ಟಿ.ಎಮ್, ಪಿ.ಎಸ್.ಐ-2 ವಾಸಪ್ಪ ನಾಯ್ಕ್, ಎಎಸ್ಐ ವಿಜಯ ಸಿ ಹಾಗೂ ಸಿಬ್ಬಂದಿಯವರಾದ, ಸತೀಶ, ಕಿರಣ್, ಸಂತೋಷ ರಾಠೋಡ್ ರವರು ಸಹಕರಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist