ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ಶಿವಲಿಂಗದ ಚಿತ್ರವಿರುವ ಅಪರೂಪದ ವೀರಗಲ್ಲು ಪತ್ತೆ.

Twitter
Facebook
LinkedIn
WhatsApp
ಉಡುಪಿ: ಶಿವಲಿಂಗದ ಚಿತ್ರವಿರುವ ಅಪರೂಪದ ವೀರಗಲ್ಲು ಪತ್ತೆ.

ಉಡುಪಿ: ಬೈಂದೂರು ತಾಲ್ಲೂಕಿನ ತೆಗ್ಗರ್ಸೆಯಲ್ಲಿ ಮಣ್ಣಿನಲ್ಲಿ ಹೂತುಹೋಗಿದ್ದ ವಿಜಯನಗರ ಕಾಲದ ಅಪರೂಪದ ವೀರಗಲ್ಲನ್ನು ಶಿರ್ವದ ಎಂ.ಎಸ್.ಆರ್.ಎಸ್ ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳು ಪ್ರೊ.ಟಿ. ಮುರುಗೇಶಿ ಅವರ ಮಾರ್ಗದರ್ಶನ ಹಾಗೂ ತೆಗ್ಗರ್ಸೆ ಟಿ. ನಾರಾಯಣ ಹೆಗ್ಡೆ ಕುಟುಂಬದವರ ಸಹಕಾರದೊಂದಿಗೆ ಹೊರತೆಗೆದು ಸಂಶೋಧಿಸಿದ್ದಾರೆ.
5 ಅಡಿ ಎತ್ತರದ ವೀರಗಲ್ಲು ಆಯತಾಕಾರದಲ್ಲಿದ್ದು ನಾಲ್ಕು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ. ಕೆಳಗಿನ ಪಟ್ಟಿಕೆಯಲ್ಲಿ ಇಬ್ಬರು ವೀರರು ಕೈಯಲ್ಲಿ ಖಡ್ಗ ಮತ್ತು ಗುರಾಣಿಗಳನ್ನು ಹಿಡಿದು ಎದುರು ಬದುರಾಗಿ ನಿಂತಿದ್ದಾರೆ. ಹಿಂದೆ ಇಬ್ಬರು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಎರಡು ಪಟ್ಟಿಕೆಗಳಲ್ಲಿಯೂ ಚಿತ್ರಗಳು ಪುನರಾವರ್ತನೆಯಾಗಿವೆ.

ಮೊದಲ ಚಿತ್ರಪಟ್ಟಿಕೆಯ ಮಧ್ಯದಲ್ಲಿ ಶಿವಲಿಂಗ, ಎಡಬದಿಯಲ್ಲಿ ಕುಳಿತ ಭಂಗಿಯಲ್ಲಿರುವ ನಂದಿ ಮತ್ತು ಬಲಬದಿಯಲ್ಲಿ ನಿಂತಿರುವ ವ್ಯಕ್ತಿಯ ಚಿತ್ರ ಇದೆ. ಮಧ್ಯದಲ್ಲಿ ಸಿಂಹ ಲಾಂಛನವಿದೆ. ಪ್ರತಿ ಚಿತ್ರಪಟ್ಟಿಕೆಯನ್ನು ಅಡ್ಡ ಪಟ್ಟಿಕೆಗಳ ಮೂಲಕ ಪ್ರತ್ಯೇಕಿಸಲಾಗಿದೆ. ಶಿವಲಿಂಗದ ಚಿತ್ರಪಟ್ಟಿಕೆಯ ಕೆಳಗಿನ ಅಡ್ಡಪಟ್ಟಿಯ ಮೇಲೆ ಎರಡು ಸಾಲಿನಲ್ಲಿ ಬರೆದ ಶಾಸನವಿದ್ದು, ಕೆಲವು ಅಕ್ಷರಗಳನ್ನು ಗುರುತಿಸಲು ಸಾದ್ಯವಾಗಿದೆ. ಅ, ಸ, ಗ, ತ, ಅಕ್ಷರಗಳು ಸ್ಪಷ್ಟವಾಗಿ ವಿಜಯನಗರದ ಶೈಲಿಯಲ್ಲಿದ್ದು, ವಿಜಯನಗರ ಕಾಲದ ಶಾಸನವೆಂದು ನಿರ್ಧರಿಸಬಹುದಾಗಿದೆ.
ವೀರಗಲ್ಲಿನ ನಾಲ್ಕು ಚಿತ್ರಪಟ್ಟಿಕೆಗಳಲ್ಲಿ ಮರಣ ಹೊಂದಿದ ವೀರರ ತಲೆ ದಿರಿಸು ಮತ್ತು ಮುಖದ ಭಾವಗಳನ್ನು ಚಿತ್ರಿಸಲಾಗಿದೆ. ಎಡಭಾಗದಲ್ಲಿರುವ ವೀರರ ತಲೆದಿರಿಸು ಮತ್ತು ಮುಖಭಾವಗಳು ಮೂರು ಚಿತ್ರಪಟ್ಟಿಕೆಗಳಲ್ಲಿ ಭಿನ್ನ ಭಿನ್ನವಾಗಿವೆ. ಇದರಿಂದ, ವೀರರು ಖಡ್ಗ ಯುದ್ದದಲ್ಲಿ ಸೆಣೆಸಿ ಮರಣ ಹೊಂದಿದ್ದಾರೆ ಎನ್ನುವುದು ಸ್ಫಷ್ಟವಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು