ಮಂಗಳವಾರ, ಮೇ 14, 2024
ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶದಲ್ಲಿ ಮೀನಿನ ಮಳೆ, ಆಗಸದಿಂದ ಉದುರಿಬಿದ್ದ ಮೀನಿನ ಮರಿಗಳು.

Twitter
Facebook
LinkedIn
WhatsApp
ಉತ್ತರ ಪ್ರದೇಶದಲ್ಲಿ ಮೀನಿನ ಮಳೆ, ಆಗಸದಿಂದ ಉದುರಿಬಿದ್ದ ಮೀನಿನ ಮರಿಗಳು.

ಉತ್ತರ ಪ್ರದೇಶ : ಆಗಸದಿಂದ ಮಳೆ, ಆಲಿಕಲ್ಲು ಮಳೆ ಬೀಳುವುದನ್ನು ಕೇಳಿದ್ದೇವೆ. ಆದರೆ ಎಂದಾದ್ರೂ ಮೀನ ಮಳೆ ಬಿದ್ದಿರುವುದನ್ನು ಕೇಳಿದ್ದೀರಾ. ಹೌದು, ನಿಮಗೆ ಅಚ್ಚರಿಯೆನಿಸಿದ್ರೂ ಇದು ನಿಜ. ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು ಜನರು ಆಶ್ಚರ್ಯದ ಜೊತೆಗೆ ಆತಂಕಕ್ಕೆ ಒಳಗಾಗಿದ್ದಾರೆ.

ಭದೋಹಿ ಪ್ರದೇಶದಲ್ಲಿ ಸೋಮವಾರ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಜೋರಾದ ಗಾಳಿಯ ಜೊತೆಗೆ ಆಕಾಶದಿಂದ ಮಳೆಯಿಂದ ಮೀನುಗಳು ಸುರಿದಿವೆ. ಮೀನುಗಳು ಬೀಳುತ್ತಿರುವುದನ್ನು ಕಂಡ ಸ್ಥಳೀರು ಆಶ್ಚರ್ಯಗೊಂಡಿದ್ದಾರೆ. ಇದೊಂದು ಪವಾಡ ಅಂತಾ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಸ್ಥಳೀಯರು ಮೀನಿನ ಮಳೆ ಬಿದ್ದಿರೋದು ಇದೇ ಮೊದಲು ಅಂತಾ ಹೇಳುತ್ತಿದ್ದಾರೆ.

ಮಳೆಯ ನಡುವಲ್ಲೇ ಸ್ಥಳೀಯರು ಸುಮಾರು 50 ಕೆ.ಜಿಯಷ್ಟು ಮೀನನ್ನು ಸಂಗ್ರಹಿಸಿದ್ದಾರೆ. ಆರಂಭದಲ್ಲಿ ಆಲಿಕಲ್ಲು ಸುರಿಯುತ್ತಿರಬಹುದು ಎಂದು ಜನರು ಭಾವಿಸಿಕೊಂಡಿದ್ದರು. ಆದರೆ ಮೀನುಗಳು ನೆಲಕ್ಕೆ ಬಿದ್ದು ಒದ್ದಾಡುವುದಕ್ಕೆ ಶುರು ಮಾಡಿವೆ. ಇದರಿಂದಾಗಿ ಸ್ಥಳೀಯರು ಮೀನುಗಳನ್ನು ಸಂಗ್ರಹಿಸುವ ಕಾರ್ಯವನ್ನು ಮಾಡಿದ್ದಾರೆ.
ಮೀನಿನ ಮಳೆಯನ್ನು ಕಂಡು ಕೆಲವರು ಮೀನುಗಳನ್ನು ಸಂಗ್ರಹಿಸಿದ್ದರೆ, ಇನ್ನೂ ಕೆಲವರು ಭಯ ಭೀತರಾಗಿದ್ದಾರೆ. ಈ ಕುರಿತು ಸಂಶೋಧಕರು ಮೀನಿನ ಮಳೆಯ ರಹಸ್ಯವನ್ನು ಬೇಧಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು