ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯೋಗ ಕಡಿತ: ಅಮೆಜಾನ್‌ಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್

Twitter
Facebook
LinkedIn
WhatsApp
ಉದ್ಯೋಗ ಕಡಿತ: ಅಮೆಜಾನ್‌ಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್

ನವದೆಹಲಿ/ಬೆಂಗಳೂರು (ನ.24): 10000 ಸಿಬ್ಬಂದಿಗಳನ್ನು ಉದ್ಯೋಗದಿಂದ ತೆಗೆದುಹಾಕಲು ಮುಂದಾಗಿರುವ ಅಮೆರಿಕ ಮೂಲದ ಅಮೆಜಾನ್‌ ಕಂಪನಿ, ಈ ಸಂಬಂಧ ಬುಧವಾರ ಬೆಂಗಳೂರಿನಲ್ಲಿರುವ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡುವ ಯತ್ನ ಮಾಡಿದೆ. ಆದರೆ ಅಮೆಜಾನ್‌ ಪ್ರತಿನಿಧಿಗಳ ಭೇಟಿಗೆ ನಿರಾಕರಿಸಿರುವ ಕಾರ್ಮಿಕ ಇಲಾಖೆ, ಉದ್ಯೋಗಿಗಳನ್ನು ತೆಗೆದುಹಾಕುವ ಸಂಬಂಧ ಈಗಾಗಲೇ ರವಾನಿಸಲಾಗಿರುವ ನೋಟಿಸ್‌ಗೆ ಮೊದಲು ಉತ್ತರ ನೀಡಿ. ಬಳಿಕ ಖುದ್ದು ಭೇಟಿ ಎಂದು ಸೂಚಿಸಿ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಜಾಗತಿಕ ಆರ್ಥಿಕ ಪರಿಸ್ಥಿತಿ ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ, ಕಂಪನಿಯ ನಷ್ಟಕಡಿಮೆ ಮಾಡಲು ಅಮೆಜಾನ್‌ ಸಂಸ್ಥೆ 10 ಸಾವಿರ ಉದ್ಯೋಗಿಗಳನ್ನು ತೆಗೆದುಹಾಕುವ ನಿರ್ಧಾರವನ್ನು ಇತ್ತೀಚೆಗೆ ಪ್ರಕಟಿಸಿತ್ತು. ಆದರೆ ಇದು ಏಕಪಕ್ಷೀಯ ಕ್ರಮ. ಇಂಥ ಕ್ರಮಕ್ಕೂ ಮೊದಲು ಉದ್ಯೋಗಿಗಳಿಗೆ 3 ತಿಂಗಳ ನೋಟಿಸ್‌ ನೀಡಬೇಕು ಮತ್ತು ಸೂಕ್ತ ಸರ್ಕಾರದ ಅನುಮತಿ ಪಡೆಯಬೇಕು. ಇದ್ಯಾವುದನ್ನೂ ಮಾಡದೇ ಉದ್ಯೋಗಿಗಳನ್ನು ತೆಗೆದು ಹಾಕಲಾಗಿದೆ ಎಂದು ಐಟಿ ಉದ್ಯೋಗಿಗಳ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಪುಣೆ ಮೂಲದ ‘ನ್ಯಾಸಂಟ್‌ ಇನ್ಫಾರ್ಮೇಷನ್‌ ಟೆಕ್ನಾಲಜಿ ಎಂಪ್ಲಾಯೀಸ್‌ ಸೆನೆಟ್‌’ ಕೇಂದ್ರಕ್ಕೆ ದೂರು ಸಲ್ಲಿಸಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದ ಕೇಂದ್ರ ಕಾರ್ಮಿಕ ಸಚಿವಾಲಯವು ಬುಧವಾರ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಮಾಹಿತಿ ನೀಡುವಂತೆ ನೋಟಿಸ್‌ ಜಾರಿ ಮಾಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ