ಉಪ್ಪಿನಂಗಡಿ; ಕಲ್ಲೇರಿ ಬಳಿ ಸ್ಕೂಟರ್ಗೆ ಕಾರು ಢಿಕ್ಕಿ - ಸವಾರ ಮೃತ್ಯು, ಮಕ್ಕಳಿಬ್ಬರಿಗೆ ಗಂಭೀರ ಗಾಯ
ಉಪ್ಪಿನಂಗಡಿ, ಏ 22: ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ.
ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನ ಎರಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕ್ಯೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಸರಗೋಡು: ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಾಟ – ನಾಲ್ವರ ಬಂಧನ:
ಕಾಸರಗೋಡು: ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ.
ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಉದುಮ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಸಾಗಾಟ ಮಾಡಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.