ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಪ್ಪಿನಂಗಡಿ: ಹುಳವಿದ್ದ ಖಾದ್ಯ ನೀಡಿಕೆ - ಹೊಟೇಲ್ ಬಂದ್

Twitter
Facebook
LinkedIn
WhatsApp
ms 130123 hotel

ಉಪ್ಪಿನಂಗಡಿ, ಜ 13 : ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತದ ನಿರ್ದೇಶನದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ತಪಾಸಣೆ ನಡೆಸಿದೆ.

ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಪೊಲೀಸ್ ಸಬ್‌ಇನ್‌ಸ್ಪೆೆಕ್ಟರ್ ರಾಜೇಶ್ ಕೆ.ವಿ., ವಿಎ ಮಹೇಶ್, ಕಂದಾಯ ಇಲಾಖಾ ಸಿಬ್ಬಂದಿ ಯತೀಶ್ ಮಡಿವಾಳ್, ಮತ್ತಿತರನ್ನು ಒಳಗೊಂಡ ಅಧಿಕಾರಿಗಳ ತಂಡ ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳ ತಪಾಸಣೆ ನಡೆಸಿದೆ.

ಮಾಂಸ ಸಂಗ್ರಹಣಾ ಫ್ರಿಡ್ಜ್‌ಗಳನ್ನು ಪರಿಶೀಲಿಸಿತು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು.

ಈ ವೇಳೆ ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖಾ ಪರವಾನಿಗೆಯನ್ನು ಹೊಂದದೇ ಇರುವುದು ಕಂಡು ಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಹೊಟೇಲನ್ನು ಬಂದ್ ಮಾಡಿಸಿದರು.ದಾಳಿ ವೇಳೆ ಸ್ಥಳೀಯ ಪೊಲೀಸರು ಸೂಕ್ತ ಬಂದೋ ಬಸ್ತು ಕೈಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ