ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ; ಯುವಕನಿಗೆ ಚೂರಿಯಿಂದ ಇರಿದು ಕೊಲೆಯತ್ನ, ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
ಉಳ್ಳಾಲ; ಯುವಕನಿಗೆ ಚೂರಿಯಿಂದ ಇರಿದು ಕೊಲೆಯತ್ನ, ಆಸ್ಪತ್ರೆಗೆ ದಾಖಲು

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆಯನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಶಾಸಕ ಯು.ಟಿ ಖಾದರ್ ಆಸ್ಪತ್ರೆ ಭೇಟಿ:

ತಡರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಯು.ಟಿ ಖಾದರ್ ಅವರು ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ವಿವರ ಪಡೆದುಕೊಂಡಿದ್ದಾರೆ. ಅಲ್ಲದೆ ತಕ್ಷಣವೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ