ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಎಪಿ, ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ; ಕುಸಿದು ಬಿದ್ದ ಕೌನ್ಸಿಲರ್!

Twitter
Facebook
LinkedIn
WhatsApp
ಎಎಪಿ, ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ; ಕುಸಿದು ಬಿದ್ದ ಕೌನ್ಸಿಲರ್!

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ (ಎಂಸಿಡಿ) ಮತ್ತೆ ಬಿಜೆಪಿ ಮತ್ತು ಎಎಪಿ ಕೌನ್ಸಿಲರ್ ಗಳ ನಡುವೆ ಮಾರಾಮಾರಿ ನಡೆದಿದೆ.

ಶುಕ್ರವಾರ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ, ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಘರ್ಷಣೆ ಸಂಭವಿಸಿದ್ದು, ಉಭಯ ಪಕ್ಷಗಳ ಕೌನ್ಸಿಲರ್ ಗಳ ನಡುವೆ ಪರಸ್ಪರ ತಳ್ಳಾಟ, ಗಲಾಟೆ, ಹಲ್ಲೆ ನಡೆದಿದೆ. ಇದರಿಂದಾಗಿ ಕೌನ್ಸಿಲರ್ ಒಬ್ಬರು ಎಂಸಿಡಿ ಸದನದಲ್ಲಿ ಕುಸಿದು ಬಿದ್ದಿದ್ದಾರೆ

ಎಂಸಿಡಿಯಲ್ಲಿ ಮೂರನೇ ಬಾರಿಗೆ ಈ ರೀತಿಯ ಅಹಿತಕರ ಘಟನೆ ನಡೆದಿದೆ. ಫೆಬ್ರವರಿ 23 ರಂದು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಯುವಾಗ ಮಾರಾಮರಿ ನಡೆದಿದ್ದರಿಂದ ಇಂದಿಗೆ ಚುನಾವಣೆಯನ್ನು  ಮುಂದೂಡಲಾಗಿತ್ತು. ಇಂದು ಕೂಡಾ ಚುನಾವಣೆ ಸಂದರ್ಭದಲ್ಲಿ ಕೌನ್ಸಿಲರ್ ಗಳು ತಾವು ಜನರಿಂದ ಚುನಾಯಿತರಾದ ಪ್ರತಿನಿಧಿಗಳು ಎಂಬುದನ್ನು ಮರೆತು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಮಹಿಳಾ ಮೇಯರ್ ಶೆಲ್ಲಿ ಒಬೆರಾಯ್ ಮೇಲೆ ಹಲ್ಲೆ ನಡೆಸಿದ ಬಿಜೆಪಿಯ ಗೂಂಡಾಗಳು ತಮ್ಮ ಮೇಲೂ ಹಲ್ಲೆ ನಡೆಸಿರುವುದಾಗಿ ಹಲ್ಲೆಗೊಳಗಾದ ಎಎಪಿ ಕೌನ್ಸಿಲರ್ ಅಶೋಕ್ ಕುಮಾರ್ ಮಾನು ಮಾಧ್ಯಮಗಳ ಮುಂದೆ ಆರೋಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ