ಎಳ್ಳಮವಾಸ್ಯೆಯಂದು ಸಮುದ್ರದ ನೀರಿನಲ್ಲಿ ಉಪ್ಪಿನಂಶ ಕಟುವಾಗಿರುತ್ತದೆ. ಸಮುದ್ರ ಸ್ನಾನ ಮಾಡಿದ್ರೆ ಚರ್ಮ ಮುಂತಾದ ದೇಹದ ಮೇಲ್ಭಾಗದ ರೋಗಗಳು ನಾಶವಾಗುತ್ತದೆ ಎಂಬುದು ಈಗಾಗಲೇ ದೃಢಪಟ್ಟಿದೆ.
ಅದರಲ್ಲೂ ಎಳ್ಳಮವಾಸ್ಯೆಯಂದು ಸಮುದ್ರದ ನೀರಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂಬ ನಂಬಿಕೆಯಿದೆ. ಇದೇ ಉದ್ದೇಶದಿಂದ ಮಲ್ಪೆ ಕಡಲಿನಲ್ಲಿ ಲಕ್ಷಾಂತರ ಮಂದಿ ದಿನಪೂತ್ರಿ ಪವಿತ್ರಸ್ನಾನ ಮಾಡಿದ್ರು.
ಉಡುಪಿ ನಗರ ಮಾತ್ರವಲ್ಲದೆ , ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಜನರು ಬಂದಿದ್ದರು. ಜನರ ಅನುಕೂಲ ಕಂತಲೆ ನೂರಾರು ವೈದಿಕರು ಹಾಜರಿದ್ದು ಪಿಂಡಪ್ರದಾನದ ಸಂಪ್ರದಾಯಗಳನ್ನು ನಡೆಸಿಕೊಟ್ಟರು. ಪಿಂಡಪ್ರದಾನ ಮಾಡಿದ ಬಳಿಕ ಸಮುದ್ರದಲ್ಲಿ ಅರ್ಗ್ಯ ಬಿಟ್ಟು ಸ್ನಾನ ಮಾಡಿ, ಅಲ್ಲೇ ಪಕ್ಕದಲ್ಲಿರುವ ಒಡಬಾಂಡೇಶ್ವರ ದೇವಸ್ಥಾನಕ್ಕೆ ಹೋಗುವುದು ಸಂಪ್ರದಾಯ.
ಬಲರಾಮ ದೇವರ ದರ್ಶನ ಕೈಗೊಂಡ ಬಳಿಕ ಸಾಕ್ಷಿಗಲನ್ನು ಮುಟ್ಟಿ ಎಳ್ಳಮವಾಸ್ಯೆಯ ಆಚರಣೆಯನ್ನು ತುಳುವರು ಮಾಡುತ್ತಾ ಬಂದಿದ್ದಾರೆ. ಕೇವಲ ಮಲ್ಪೆ ಕಡಲ ತೀರ ಮಾತ್ರವಲ್ಲ ಉಡುಪಿ ಜಿಲ್ಲೆಯ ಬಹುತೇಕ ಕಡಲ ತೀರ ಪ್ರದೇಶಗಳಲ್ಲಿ ಇಂದು ಲಕ್ಷಾಂತರ ಜನ ಸಮುದ್ರ ಸ್ನಾನ ಕೈಗೊಂಡಿದ್ದಾರೆ.
ಮಲ್ಪೆ ಕಡಲ ತೀರದುದ್ದಕ್ಕೂ ಪೊಲೀಸ್ ಸರ್ಪಗಾವಲಿತ್ತು. ಕರಾವಳಿ ಕಾವಲು ಪಡೆ, ಮಲ್ಪೆ ಈಜು ತಜ್ಞರು ಅರಬ್ಬೀ ಸಮುದ್ರದಲ್ಲಿ ಗಸ್ತು ತಿರುಗುತಿದ್ದರು. ಯಾವುದೇ ಅವಘಡಗಳ ಸಂಭವಿಸದಂತೆ ಕಟ್ಟೆಚ್ಚರ ವಹಿಸಿದ್ದರು
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist