ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಕಾಂಗಿಯಾಗಿ ವಾಸವಿದ್ದ ಮಹಿಳೆಗೆ ಇರಿದು ಕೊಲೆ: ಪರಿಚಿತರಿಂದಲೇ ಕೃತ್ಯ ಶಂಕೆ

Twitter
Facebook
LinkedIn
WhatsApp
pexels kat wilcox 923681

ಬೆಂಗಳೂರು (ಏ.10): ವೈಯಕ್ತಿಕ ಕಾರಣದಿಂದ ಮನೆಯಲ್ಲಿ ಏಕಾಂಗಿಯಾಗಿ ನೆಲೆಸಿದ್ದ ಮಹಿಳೆಯೊಬ್ಬಳಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟಿ.ಸಿ.ಪಾಳ್ಯ ನಿವಾಸಿ ಅಂಬಿಕಾ (40) ಕೊಲೆಯಾದ ದುರ್ದೈವಿ. ನಾಲ್ಕು ದಿನಗಳ ಹಿಂದೆಯೇ ಈ ಹತ್ಯೆ ನಡೆದಿದೆ. ಮೃತಳ ಮನೆಯಿಂದ ಬರುತ್ತಿದ್ದ ದುರ್ವಾಸನೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಶನಿವಾರ ಸ್ಥಳೀಯರು ತಿಳಿಸಿದ್ದಾರೆ. ಮೃತಳ ಮನೆ ಬಾಗಿಲು ಮುರಿದು ಒಳ ಪ್ರವೇಶಿಸಿ ಪೊಲೀಸರು ಪರಿಶೀಲಿಸಿದಾಗ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 

ಬಳಿಕ ಅಂಬಿಕಾಳ ಮೊಬೈಲ್‌ನಲ್ಲಿ ನಂಬರ್‌ ಪಡೆದು ಆಕೆಯ ಕುಟುಂಬದವರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಅಂಬಿಕಾ ಬಳ್ಳಾರಿ ಜಿಲ್ಲೆ ಶಿರಗುಪ್ಪ ತಾಲೂಕಿನ ಎಚ್‌.ಹೊಸಹಳ್ಳಿ ಗ್ರಾಮದವಳಾಗಿದ್ದು, ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಟಿ.ಸಿ.ಪಾಳ್ಯದ ಗಾರ್ಡನ್‌ ಸಿಟಿ ಕಾಲೇಜು ಸಮೀಪ ಅಂಬಿಕಾ ನೆಲೆಸಿದ್ದಳು. ಹಲವು ತಿಂಗಳ ಹಿಂದೆಯೇ ಅನಾರೋಗ್ಯ ಹಿನ್ನೆಲೆಯಲ್ಲಿ ಆಕೆಯ ಪತಿ ಸಹ ಮೃತಪಟ್ಟಿದ್ದರು. ಇಬ್ಬರು ಮಕ್ಕಳ ಪೈಕಿ ಹಿರಿಯ ಮಗ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಓದುತ್ತಿದ್ದಾನೆ. ಈ ಕೃತ್ಯಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏ.3ರಂದು ತನ್ನ ನೆರೆಮನೆಯ ಮಹಿಳೆಯನ್ನು ಭೇಟಿಯಾಗಿ ಅಂಬಿಕಾ ಮಾತನಾಡಿದ್ದಳು. ನಂತರ ಆಕೆ ಹೊರಗೆ ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ಏ.4 ಅಥವಾ ಏ.5ರಂದು ಆಕೆಯ ಮನೆಗೆ ಬಂದಿರುವ ಪರಿಚಿತರೇ ಹತ್ಯೆ ಮಾಡಿದ್ದಾರೆ. ಮೃತಳ ದೇಹದಲ್ಲಿ ನಾಲ್ಕೈದು ಬಾರಿ ಚೂರಿ ಇರಿತದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪೊಲೀಸ್‌ ಆಗುತ್ತೇನೆ ಎಂದ ಮೃತಳ ಮಗ: ಮೃತ ಅಂಬಿಕಾ ಸಾವಿನ ಬಗ್ಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಆಕೆಯ ಮಗನಿಗೆ ಕುಟುಂಬ ಸದಸ್ಯರು ತಿಳಿಸಿದ್ದರು. ತಾಯಿ ಹತ್ಯೆ ವಿಚಾರ ತಿಳಿದು ಆಘಾತಗೊಂಡು ಆತ, ನಗರಕ್ಕೆ ಶನಿವಾರ ರಾತ್ರಿಯೇ ಬಂದು ಪೊಲೀಸರನ್ನು ಭೇಟಿಯಾಗಿದ್ದ. ಸೋಮವಾರ ಆತನಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೆ. ನಾನು ಚೆನ್ನಾಗಿ ಓದಿ ಮುಂದೆ ಪೊಲೀಸ್‌ ಆಗುವೆ ಎಂದು ಪಿಎಸ್‌ಐ ಅನಿತಾ ಅವರಿಗೆ ಹೇಳಿ ಅಂಬಿಕಾ ಪುತ್ರ ಕಣ್ಣೀರಿಟ್ಟಿದ್ದಾನೆ. ಆಗ ಆತನನ್ನು ಸಂತೈಸಿ ಶಿಕ್ಷಣಕ್ಕೆ ನೆರವು ನೀಡುವ ಭರವಸೆಯನ್ನು ಪಿಎಸ್‌ಐ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ