ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏ. ​11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

Twitter
Facebook
LinkedIn
WhatsApp
All about coconut tree 15

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ಮುಖ್ಯಚುನಾವಣಾಧಿಕಾರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ. ಏಪ್ರಿಲ್​ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ ತಿಳಿಸಿದ್ದಾರೆ. ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದು. ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗುತ್ತೆ. ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ. ನಮ್ಮ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಹೋಗುತ್ತಾರೆ. ವಿಕಲಚೇತನರ ಮತದಾನದ ವೇಳೆ ಗೌಪ್ಯತೆ ಕಾಪಾಡಲಾಗುತ್ತೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 NRIಗಳ ಹೆಸರು ಸೇರ್ಪಡೆಯಾಗಿವೆ ಎಂದು ವಿಧಾನಸೌಧದಲ್ಲಿ ಮನೋಜ್ ಕುಮಾರ್ ಮೀನಾ ಹೇಳಿದರು.

ಇವತ್ತಿನಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಾಗಿ ಈ ಕ್ಷಣದಿಂದ ರಾಜಕಾರಣಿಗಳ ಕಾರ್ಯಭಾರ ಮುಕ್ತಾಯವಾಗುತ್ತೆ. ಯಾವುದೇ ಸಭೆ, ಸಮಾರಂಭಗಳನ್ನ ಮಾಡಲು ಬರಲ್ಲ. ಅಧಿಕಾರಿಗಳ ಸಭೆ ನಡೆಸೋಕೆ ಬರಲ್ಲ. ಯಾವುದೇ ಯೋಜನೆಗಳಿಗೆ ಸಹಿಹಾಕುವಂತಿಲ್ಲ. ಹೊಸ ಕಾರ್ಯಕ್ರಮ ಅನುಷ್ಟಾನ ಮಾಡುವಂತಿಲ್ಲ. ಇವತ್ತಿನಿಂದ ಎಲ್ಲವೂ ನಿರ್ಬಂಧಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳಿವೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. 80 ವರ್ಷ ಮೇಲ್ಪಟ್ಟವರು, ದಿವ್ಯಾಂಗರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯ. ಇವಿಎಂ ಬ್ಯಾಲೆಟ್ ಪೇಪರ್ ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.

89 ಸಾವಿರ ವಿವಿ ಪ್ಯಾಟ್​ಗಳ ಬಳಕೆ

ಮತಗಟ್ಟೆಗಳಲ್ಲಿ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ. ಶೌಚಾಲಯ, ಕುಡಿಯುವ ನೀರು ಒದಗಿಸುತ್ತೇವೆ. 100% ಸೌಕರ್ಯ ರಾಜ್ಯದಲ್ಲಿ ಒದಗಿಸುತ್ತೇವೆ. 3 ಲಕ್ಷ ನಮಗೆ ಸಿಬ್ಬಂದಿಗಳು ಸಿಗಲಿದ್ದಾರೆ. ಚುನಾವಣಾ ಸಿಬ್ಬಂದಿಗೆ ತರಬೇತಿ ಕೂಡ ನೀಡಲಾಗಿದೆ. ಎಲ್ಲ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಹೈದ್ರಾಬಾದ್ ನಿಂದ ಹೊಸ ಇವಿಎಂ, ವಿವಿಪ್ಯಾಟ್ ಬಂದಿವೆ. ಯಾವ ಚುನಾವಣೆಯಲ್ಲೂ ಇವನ್ನ ಬಳಸಿಲ್ಲ. ಮೊದಲ ಬಾರಿಗೆ ಇವನ್ನ ಬಳಸಲಾಗ್ತಿದೆ. 89 ಸಾವಿರ ವಿವಿ ಪ್ಯಾಟ್ ಗಳು ಬಳಕೆಯಾಗ್ತಿವೆ. 1 ಲಕ್ಷ 834 ಸೆಕ್ಸ್ ವರ್ಕರ್ಸ್ ರಾಜ್ಯದಲ್ಲಿದ್ದಾರೆ. ಅವರನ್ನು ಮತ ಪಟ್ಟಿಗೆ ಸೇರಿಸಿದ್ದೇವೆ. ಬೆಂಗಳೂರು ದಕ್ಷಿಣ ಕ್ಷೇತ್ರ ದೊಡ್ಡ ಕ್ಷೇತ್ರ. 6 ಲಕ್ಷ 91 ಸಾವಿರ ಮತದಾರರು ಅಲ್ಲಿದ್ದಾರೆ. ಶೃಂಗೇರಿ ಅತಿ ಕಡಿಮೆ ಮತದಾರರಿರುವ ಕ್ಷೇತ್ರ. 58282 ಮತಗಟ್ಟೆಗಳಿವೆ. ಬೆಳಗಾವಿಯಲ್ಲಿ ಅತಿ ಹೆಚ್ಚು ಮತಗಟ್ಟೆಗಳಿವೆ ಎಂದರು.

ಮನೆಯಿಂದ ವೋಟ್ ಹಾಕುವವರಿಗೆ ಅವಕಾಶ

ಮನೆಯಿಂದಲೇ ಮತ ಹಾಕಲು ಅವಕಾಶವಿದೆ. ಅಂತವರು 12-ಡಿ ಅಡಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12ರವರೆಗೆ ಅಧಿಸೂಚನೆ ಹೊರಡಲಿದೆ. ಅಷ್ಟರೊಳಗೆ ಅಂತವರು ಅರ್ಜಿ‌ಸಲ್ಲಿಸಬಹುದು. ಮತ ಹಾಕಲು ಆ್ಯಪ್ ಮಾಡಲಾಗಿದೆ. ಮನೆಗೆ ಹೋಗಿ ಅವರು ಅರ್ಹರೇ ಎಂದು ನಮ್ಮ ಟೀಮ್ ಪರಿಶೀಲಿಸ್ತಾರೆ. ನಂತರ ಮತದಾನಕ್ಕೆ ಅವಕಾಶ ಕಲ್ಪಿಸುತ್ತೇವೆ. ಮತವನ್ನ ಗೌಪ್ಯವಾಗಿಯೇ ಸಂಗ್ರಹಿಸುತ್ತೇವೆ. ಮತದಾನಕ್ಕೂ ಮೂರು ದಿನ ಮೊದಲೇ ಇದನ್ನ ಮಾಡ್ತೇವೆ. ಕ್ಯಾಮೆರಾ, ಪೊಲೀಸ್ ಜೊತೆಯೇ ಚುನಾವಣಾಧಿಕಾರಿಗಳು ಮನೆಗೆ ಭೇಟಿ ನೀಡುತ್ತಾರೆ. ಪಕ್ಷದ ಬೂತ್ ಏಜೆಂಟ್ ಗಳನ್ನು ಕರೆದುಕೊಂಡು ಹೋಗುತ್ತೇವೆ. ಅವರ ಮತವನ್ನ ಸಂಗ್ರಹ ಮಾಡ್ತಾರೆ. ಒಂದೊಂದು ಬೂತ್ ನಲ್ಲಿ ಎಷ್ಟುಮಂದಿ ಮನೆಯಿಂದ ವೋಟ್ ಮಾಡೋಕೆ ಅರ್ಹರಿದ್ದಾರೆ ಅನ್ನೋದರ ಮೇರೆಗೆ ನಮ್ಮ ತಂಡ ನೇಮಕ ಮಾಡಲಾಗುತ್ತದೆ. ಮಾಧ್ಯಮಗಳ ಸರ್ವೆಯಲ್ಲಿ ಮತದಾರರ ವೈಯಕ್ತಿಕ ವಿವರ ಕೇಳಬಾರದು. ಎಪಿಕ್ ಕಾರ್ಡ್, ಪೋನ್ ನಂಬರ್ ವಿವರ ಕೇಳುವಂತಿಲ್ಲ. ಅಂತಹುದು ಗಮನಕ್ಕೆ ಬಂದರೆ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist