ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐದು ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭಿಸುವ ಸುಳಿವು ನೀಡಿದ ಸಚಿವ ಆರ್. ಅಶೋಕ್

Twitter
Facebook
LinkedIn
WhatsApp
ಐದು ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭಿಸುವ ಸುಳಿವು ನೀಡಿದ ಸಚಿವ ಆರ್. ಅಶೋಕ್

ಬೆಂಗಳೂರು:ರಾಜ್ಯದಲ್ಲಿ ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿವೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತಿವೆ. ಪಾಸಿಟೀವ್ ಪ್ರಕರಣಗಳ ಸಂಖ್ಯೆ ಸದ್ಯಕ್ಕೆ ಶೇ.7ಕ್ಕಿಂತ ಕಡಿಮೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ಹಂತಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಆರಂಭಿಸುವುದಾಗಿ ಕಂದಾಯ ಸಚಿವ ಆರ್​. ಅಶೋಕ್ ಸುಳಿವು ನೀಡಿದ್ದಾರೆ.

ಕೊರೋನಾ ಸಾವುಗಳು ಹಾಗೂ ಹೊಸ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸೋಂಕಿನ ಪ್ರಮಾಣವನ್ನು ಮತ್ತಷ್ಟು ತಗ್ಗಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, ಒಂದೇ ಸಮಯದಲ್ಲಿ ಲಾಕ್‌ಡೌನ್ ಅನ್ನು ಸಡಿಲಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್ ಮತ್ತು ನಾನು ಮುಖ್ಯಮಂತ್ರಿಯೊಂದಿಗೆ ವಿವರವಾದ ಚರ್ಚೆ ನಡೆಸಿದ್ದೇವೆ ಎಂದು ಸಚಿವ ಅಶೋಕ್‌ ತಿಳಿಸಿದ್ದಾರೆ.

ಆದರೆ, ಜೂನ್ 14ರ ನಂತರ ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭಗೊಳ್ಳಲಿದೆ. ಬಹುಶಃ ಇದನ್ನು ನಾಲ್ಕರಿಂದ ಐದು ಹಂತಗಳಲ್ಲಿ ಮಾಡಬಹುದು. ಮೊದಲ ಹಂತದಲ್ಲಿ ಈಗ ಬೆಳಿಗ್ಗೆ 6 ರಿಂದ 10 ರ ನಡುವೆ ಇರುವ ವಿಶ್ರಾಂತಿ (ಶಾಪಿಂಗ್‌ಗಾಗಿ) ಸಮಯವನ್ನು ಇನ್ನಷ್ಟು ವಿಸ್ತರಿಸಬಹುದು.
ಉದ್ಯಾನವನಗಳಲ್ಲಿ ವಾಕ್ ಮಾಡಲು ಹೋಗುವವರಿಗೆ ಸ್ವಲ್ಪ ವಿನಾಯಿತಿ ನೀಡಬಹುದು. ಇದೆಲ್ಲವನ್ನೂ ಮುಖ್ಯಮಂತ್ರಿ ಅಂತಿಮ ತೀರ್ಮಾನಕ್ಕೆ ಒಳಪಡಿಸಲಾಗುತ್ತದೆ. ಒಂದೇ ಸಮಯದಲ್ಲಿ ಲಾಕ್​ಡೌನ್ ಅನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಆರ್​. ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಇನ್ನೂ 2,000 ಶ್ರೇಣಿಯಲ್ಲಿ ಸುಳಿದಾಡುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರ ಉಪಾಧ್ಯಕ್ಷರೂ ಆಗಿರುವ ಸಚಿವ ಆರ್​. ಅಶೋಕ್ ಇದು 500 ಕ್ಕಿಂತ ಕಡಿಮೆ ಬರಬೇಕಿದೆ ಎಂದು ಈಗಾಗಲೇ ಹೇಳಿದ್ದಾರೆ.
ನಾವು ಅನ್ಲಾಕ್ ಮಾಡುವಾಗ ಸಕಾರಾತ್ಮಕ ಪ್ರಕರಣಗಳ ಏರಿಕೆಯನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕಾಗುತ್ತದೆ. ಇದೇ ಸಂದರ್ಭದಲ್ಲಿ ಐಟಿ / ಬಿಟಿ ಮತ್ತು ಇತರ ಕೆಲವು ಕ್ಷೇತ್ರಗಳಿಗೆ ಜಾರಿಯಲ್ಲಿರುವ ವರ್ಕ್​ ಫ್ರಂ ಹೋಮ್ (ಮನೆಯಿಂದ ಕೆಲಸ) ವ್ಯವಸ್ಥೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು