ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ಕುಟುಂಬದ ‌7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

Twitter
Facebook
LinkedIn
WhatsApp
ಒಂದೇ ಕುಟುಂಬದ ‌7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳಮ್ಮ (28) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಲಭಾದೆ ತಾಳಲಾರದೆ ನಿನ್ನೆ (ಫೆ.2) ಮಧ್ಯಾಹ್ನ ಜಮೀನಿನಲ್ಲಿ ಇಲಿ ಪಾಷಾಣ ಸೇವಿಸಿದ್ದಾರೆ. ವಿಷಯ ತಿಳಿದ ಸ್ಥಳಿಯರು ಸಂಜೆ ವೇಳೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಂಗಳಮ್ಮ (28), ಮಂಗಳಮ್ಮನ ಪತಿ ರಾಜು(31), ಮಂಗಳಮ್ಮನ ತಾಯಿ ಸೊಮ್ಮಪುರದಮ್ಮ(48), ಮಕ್ಕಳಾದ ಆಕಾಶ್(9), ಕೃಷ್ಣ(13), ಮಂಗಳಮ್ಮ ತಂಗಿ ಸವಿತಾ(24) ಮತ್ತು ಸವಿತಾ ಮಗಳು ದರ್ಶಿನಿ (4) ವಿಷಸೇವಿಸಿದ್ದಾರೆ. ಮಂಗಳಮ್ಮನ ಪತಿ ರಾಜು ಸುಮಾರು 10 ಲಕ್ಷ ಸಾಲ ಮಾಡಿದ್ದನು.

ರಾಜು‌ ಮೂಲತಃ ಬೆಂಗಳೂರು ದಕ್ಷಿಣ ತಾಲೂಕಿನ ಸುಬ್ಬರಾಯನಪಾಳ್ಯ ಗ್ರಾಮದವನು. ಸಾಲಗಾರರ‌ ಕಾಟದಿಂದಾಗಿ ಪತ್ನಿ ಊರು‌ ದೊಡ್ಡಮಣ್ಣುಗುಡ್ಡೆ ಗ್ರಾಮಕ್ಕೆ ಬಂದು ನೆಲೆಸಿದ್ದನು. ಇಲ್ಲಿಯೂ ಸಾಲಗಾರರ ಕಾಟ ಮುಂದುವರಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ